Thursday, August 13, 2026
25.1 C
Belagavi

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ

advertisement

spot_img

ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ.
ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು.ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ.
ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು.ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ಚಲಚಿತ್ರದಿಂದ ಸಾಧ್ಯವಿದೆ.
ಸಮಾಜಮುಖಿ ಸಿನಿಮಾ ಮಾಡುವವರಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ.ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಮತ್ತು ಅನುಕರಣೀಯ.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img