Tuesday, February 10, 2026
31.1 C
Belagavi

ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ

advertisement

spot_img

ಬೆಂಗಳೂರು, ಡಿಸೆಂಬರ್ 22:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆ ತಿಳಿಸಲಿದೆ. ಕೆಲ ದಿನಗಳ ಹಿಂದೆಯಷ್ಟೇ ಕೆಎಸ್‌ಸಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್‌ಸಿಎ ಅವರು ಹೇಳಿದ್ದಾರೆ ಎಂದು ತಿಳಿಸಿದರು.ಸಭೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಅವರು ಹಾಗೂ ಕೆಎಸ್‌ಸಿಎ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img