ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಚಿವ ಎಸ್ ಎಸ್ ಬೋಸರಾಜು
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷದ ರಾಜ್ಯಗಳಲ್ಲಿ ಅಸಹಕಾರ ತೋರುತ್ತಿದ್ದಾರೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎಸ್ ಎಸ್ ಬೋಸರಾಜು ಆರೋಪಿಸಿದ್ದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ೧೫೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಒಂಬತ್ತು ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿ ಸಚಿವರು ಮಾತನಾಡಿ, ಪಂಜಾಬ್ ಕೇರಳ ತೆಲಂಗಾಣ , ಕರ್ನಾಟಕ ಹಾಗೂ ವಿರೋಧ ಪಕ್ಷಗಳು ಯಲ್ಲಿ ಇದ್ದಾವೆ ಅಲ್ಲಿ ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷ ಹೇಳಿದ ರೀತಿಯಲ್ಲಿ ಕೇಳುತ್ತಾರೆ ಎಂದು ಆರೋಪಿಸಿದರು.
ಸಂವಿಧಾನಕ್ಕೆ ಹಾಗೂ ಕನ್ನಡಿಗರಿಗೆ ರಾಜ್ಯಪಾಲರು ತುಂಬಾ ಅಗೌರವನ್ನು ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.



