Saturday, April 11, 2026
36.1 C
Belagavi

ನಕಲಿ ಕಾಂಗ್ರೆಸ್ ಪಕ್ಷದಿಂದ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಬಿ.ವೈ.ವಿಜಯೇಂದ್ರ

advertisement

spot_img

ನಕಲಿ ಕಾಂಗ್ರೆಸ್ ಪಕ್ಷದಿಂದ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ
415 ಸ್ಥಾನದಿಂದ 99ಕ್ಕೆ ಕುಸಿದ ಕಾಂಗ್ರೆಸ್: ವಿಜಯೇಂದ್ರ

ಬೆಂಗಳೂರು: ಹಿಂದೊಮ್ಮೆ 415 ಸಂಸದರ ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಇವತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇವಲ 99 ಸ್ಥಾನಗಳಿಗೆ ತೃಪ್ತಿ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಂಥ ಹೀನಾಯ ಪರಿಸ್ಥಿತಿ ಬಂದಿದೆ ಎಂದು ಒಂದು ಕ್ಷಣ ಯೋಚಿಸಬೇಕಾಗುತ್ತದೆ. ಹಿಂದೆ ಸೀತೆಯನ್ನು ರಾವಣ ಅಪಹರಿಸಿ ಲಂಕೆಗೆ ತೆಗೆದುಕೊಂಡು ಹೋದನೋ, ಅದೇ ರೀತಿ ಕಾಂಗ್ರೆಸ್ಸಿನವರು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಂಡಿದೆ. ಈ ನಕಲಿ ಕಾಂಗ್ರೆಸ್ ಪಕ್ಷವು, ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಅಷ್ಟೇ ಅಲ್ಲ; ಬಡತನ ನಿರ್ಮೂಲನೆ ಮಾಡುತ್ತೇವೆ; ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ ಎಂದು ನುಡಿದರು.
ಕಾಂಗ್ರೆಸ್ ಪಕ್ಷವು ದೇಶದಲ್ಲಿ ಇಂಥ ಹೀನಾಯ ಪರಿಸ್ಥಿತಿಗೆ ಇವತ್ತು ಯಾಕೆ ಬಂದಿದೆ ಎಂದು ಬೆಳಕು ಚೆಲ್ಲಬೇಕಾಗಿತ್ತು. ಈ ದೇಶದಲ್ಲಿ 1961ರಲ್ಲಿ ಕಾಂಗ್ರೆಸ್ಸಿನ 364 ಸಂಸದರಿದ್ದು, 1984ರಲ್ಲಿ 415 ಸಂಸದರು ಸಂಸತ್ತಿನಲ್ಲಿದ್ದರು ಎಂದು ಗಮನಕ್ಕೆ ತಂದರು.
ನಮ್ಮ ರಾಜ್ಯದಿಂದ ಜಿಎಸ್‍ಟಿ ತೆರಿಗೆ ಮೂಲಕ ಕೇಂದ್ರಕ್ಕೆ ಎಷ್ಟು ಮೊತ್ತ ಹೋಗಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದ ಅವರು, ಆಡಳಿತ ಪಕ್ಷದವರ ಮಾತನ್ನು ಕೇಳುತ್ತಿದ್ದರೆ ನಮ್ಮ ರಾಜ್ಯದ ತೆರಿಗೆ ಹಣದಿಂದ ಕೇಂದ್ರ ಸರಕಾರವು ಬಹಳ ಭ್ರಷ್ಟಾಚಾರ ಮಾಡಿದೆ; ಲೂಟಿ ಮಾಡಿದೆ; ಈ ದೇಶದಲ್ಲಿ, ರಾಜ್ಯದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ಇದು ಒಂದು ರೀತಿ ಅರ್ಥಹೀನ ಎಂದು ತಿಳಿಸಿದರು.

ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು..
ನಮ್ಮ ರಾಜ್ಯ ಮತ್ತು ಹೊರರಾಜ್ಯಗಳಿಂದ ತೆರಿಗೆ ಮೂಲಕ ಕೇಂದ್ರವು ಜಿಎಸ್‍ಟಿ ಸಂಗ್ರಹ ಮಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ, ಇಡೀ ದೇಶದಲ್ಲಿ 2 ಜಿ ಸ್ಕ್ಯಾಮ್, ಕಲ್ಲಿದ್ದಲು ಹಗರಣ, ಕಾಮನ್‍ವೆಲ್ತ್ ಗೇಮ್ಸ್ ಹಗರಣದ ಚರ್ಚೆ ಆಗುತ್ತಿತ್ತು. ಈ ದೇಶದಲ್ಲಿ ಅಭಿವೃದ್ಧಿ ಕುರಿತು ಚರ್ಚೆಯೇ ಆಗುತ್ತಿರಲಿಲ್ಲ. ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು ಎಂದು ಹೇಳಿದರು.

ಮೋದಿಯವರ ಸರಕಾರದ ಭ್ರಷ್ಟಾಚಾರರಹಿತ ಆಡಳಿತ
ಆದರೆ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ವಿಶೇಷವಾಗಿ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ಅಧಿಕಾರ ನಡೆಸುವ ನಂತರದಲ್ಲಿ ಇವತ್ತು ಈ ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗುತ್ತಿಲ್ಲ. 2014ರಿಂದ 2025ರ ಅವಧಿಯಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ವಿರುದ್ಧ ಯಾವುದೇ ಒಂದು ಭ್ರಷ್ಟಾಚಾರದ ಆರೋಪ ಮಾಡಲು ಕಾಂಗ್ರೆಸ್ಸಿನವರಿಗೆ ಸಾಧ್ಯವಾಗಿಲ್ಲ ಎಂದು ತಿಳಿಸಿದರು. ನರೇಂದ್ರ ಮೋದಿಯವರು ಆ ರೀತಿಯ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದನ್ನು ಈ ದೇಶದ ಜನರು ಚರ್ಚೆ ಮಾಡುತ್ತಿದ್ದಾರೆ ಎಂದು ಗಮನ ಸೆಳೆದರು.
ಇವತ್ತು ದೇಶದಲ್ಲಿ ವಿಕಸಿತ ಭಾರತದ ಕುರಿತು ಚರ್ಚೆ ಆಗುತ್ತಿದೆ. ಭಾರತದ ಅಭಿವೃದ್ಧಿ ಪಥದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಜಿಎಸ್‍ಟಿ ವಿಷಯದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಆಗುತ್ತಿದೆ ಎಂಬ ಚರ್ಚೆ ಆಗುತ್ತಿದೆ. ಆದರೆ, ದೇಶದಲ್ಲಿ 2014ರಿಂದ 2025ರ ನಡುವೆ ಆಗಿರುವ ಆಡಳಿತದಲ್ಲಿನ ಆಮೂಲಾಗ್ರ ಬದಲಾವಣೆ ಕುರಿತು ಯಾರೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.
ಕೇಂದ್ರ ಸರಕಾರವು ಜಿಎಸ್‍ಟಿಯ ಲಕ್ಷಾಂತರ ಕೋಟಿ ಮೊತ್ತವನ್ನು ಬಂಡವಾಳವಾಗಿ ಹೂಡುತ್ತಿರುವ ಕುರಿತು ಚರ್ಚೆ ಮಾಡಬೇಕಿದೆ. ಮೋದಿಯವರ ಸರಕಾರವು ಈ ದೇಶದ ಮೂಲಭೂತ ಸೌಕರ್ಯ, ಭದ್ರತಾ ವ್ಯವಸ್ಥೆ, ಉದ್ಯೋಗ ಸೃಷ್ಟಿ ಕ್ಷೇತ್ರಕ್ಕೆ ಆದ್ಯತೆಯಿಂದ ಹಣ ನೀಡುತ್ತಿದೆ. ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರವು ರಾಷ್ಟ್ರ ಮೊದಲು ಚಿಂತನೆಯಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಿದೆ ಎಂದು ವಿವರಿಸಿದರು.

ದೇಶದಲ್ಲಿ 2 ಲಕ್ಷ ಸ್ಟಾರ್ಟಪ್‍ಗಳಿಗೆ ಅವಕಾಶ..
ರಕ್ಷಣಾ ಬಜೆಟ್ ಮೊತ್ತ ಹಲವು ಪಟ್ಟು ಹೆಚ್ಚಾಗಿದೆ. ಹೆದ್ದಾರಿಯ ನಿರ್ಮಾಣವೂ ಭರದಿಂದ ಸಾಗಿದೆ ಎಂದು ಗಮನಕ್ಕೆ ತಂದರು. ಉದ್ಯೋಗ ಸೃಷ್ಟಿಗೆ ಪೂರಕವಾಗಿ ಕಾಯ್ದೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು. ಕೇಂದ್ರ ಸರಕಾರದ ನೀತಿಯ ಪರಿಣಾಮವಾಗಿ ಇಡೀ ದೇಶದಲ್ಲಿ 2 ಲಕ್ಷ ಸ್ಟಾರ್ಟಪ್‍ಗಳಿಗೆ ಅವಕಾಶವಾಗಿದೆ ಎಂದರು. ಯೂನಿಕಾರ್ನ್‍ಗಳೂ ಆರಂಭವಾಗಿದ್ದು, ಇದರಿಂದ 2024ರವರೆಗೆ 16.6 ಲಕ್ಷ ನೇರ ಉದ್ಯೋಗ ದೇಶದಲ್ಲಿ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಶೇ 74 ರಷ್ಟು ಗ್ರಾಮೀಣ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ..
ದೇಶದಲ್ಲಿ ಸ್ವಾತಂತ್ರ್ಯಾನಂತರದ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೂ, ಶೇ 17 ಗ್ರಾಮೀಣ ಜನರಿಗೆ ಮಾತ್ರ ಕುಡಿಯುವ ನೀರಿನ ವ್ಯವಸ್ಥೆ ಆಗಿತ್ತು. ಆದರೆ, ನರೇಂದ್ರ ಮೋದಿಯವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಶೇ 74 ರಷ್ಟು ಗ್ರಾಮೀಣ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಆಗಿದೆ. ಸುಮಾರು 12 ಕೋಟಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವು ಕೇಂದ್ರ ಸರಕಾರದ ನೇತೃತ್ವದಲ್ಲಿ ಆಗಿದೆ ಎಂದು ನುಡಿದರು.
ಈ ದೇಶದ ಸುರಕ್ಷತೆ ಮತ್ತು ಭದ್ರತೆ ಅಷ್ಟೇ ಮುಖ್ಯವಾದುದು. ಈಶಾನ್ಯ ಭಾಗದ ರಾಜ್ಯಗಳಿಗೆ ಹಿಂದಿನ ಕೇಂದ್ರ ಸರಕಾರವು ಗಮನ ಕೊಡುತ್ತಿರಲಿಲ್ಲ. ಆದರೆ, ನರೇಂದ್ರ ಮೋದಿಯವರ ಸರಕಾರ ಆಡಳಿತ ವಹಿಸಿಕೊಂಡ ಬಳಿಕ ಕಳೆದ 10 ವರ್ಷಗಳಲ್ಲಿ 6.5 ಲಕ್ಷ ಕೋಟಿ ನೀಡಿದ್ದು, ಅಲ್ಲಿ ಹೆದ್ದಾರಿ ನಿರ್ಮಾಣ, ಮೂಲಭೂತ ಸೌಕರ್ಯಗಳಿಗಾಗಿ ಖರ್ಚು ಮಾಡಿದ್ದಾರೆ ಎಂದರು.
ಇಡೀ ದೇಶದಲ್ಲಿ ಇವತ್ತು ನಕ್ಸಲಿಸಂ ಬಗ್ಗೆ ಚರ್ಚೆ ಆಗುತ್ತಿಲ್ಲ; 2014ರ ಮೊದಲಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ನಕ್ಸಲರು ಅಲ್ಲಿ ದಾಳಿ ಮಾಡಿದರು; ಇಲ್ಲಿ ಪೊಲೀಸರು ನಕ್ಸಲರಿಂದ ಸತ್ತರು; ಇಲ್ಲಿ ಬಡವರ ಪ್ರಾಣಹಾನಿ ಆಗಿದೆ ಎಂದು ಪ್ರಕಟವಾಗಿ ಚರ್ಚೆ ಆಗುತ್ತಿತ್ತು. 2014ರ ಪೂರ್ವದಲ್ಲಿ ಹಲವಾರು ರಾಜ್ಯಗಳಲ್ಲಿ ನಕ್ಸಲರ ಕಾಟ ತೀವ್ರವಾಗಿತ್ತು. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಯವರ ಸರಕಾರದ ನೀತಿಯಿಂದ, ಅಲ್ಲಿ ಹೆಚ್ಚು ಉದ್ಯೋಗಾವಕಾಶ ಸೇರಿ ಮೂಲಭೂತ ಸೌಕರ್ಯಗಳಿಂದ ನಕ್ಸಲರ ಸಮಸ್ಯೆ ಇಲ್ಲವಾಗಿದೆ ಎಂದು ಗಮನ ಸೆಳೆದರು.

Hot this week

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

Topics

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img