ಅಥಣಿ _ಪ್ರತಿಯೊಬ್ಬರ ಜೀವ ಅತ್ಯಮೂಲ್ಯ, ತಮ್ಮ ಕುಟುಂಬದ ಸದಸ್ಯರ ಗೋಸ್ಕರ ಪ್ರತಿಯೊಬ್ಬ ನಾಗರಿಕರು ರಸ್ತೆ ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಅಥಣಿ ಆರ್ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಹೇಳಿದರು.
ತಾಲೂಕಿನ ಸತ್ತಿ ಗ್ರಾಮದ ಪಾಟೀಲ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ, ಶ್ರೀ ಬಾಳಕೃಷ್ಣ ಮಹಾರಾಜ ಸಂಸ್ಕೃತ ಪಾಠ ಶಾಲೆಯ ಹಾಗೂ ಅಥಣಿ ಆರ್ ಟಿ ಒ ಇಲಾಖೆಯ ಸಯೋಗದಲ್ಲಿ ಶುಕ್ರವಾರ ಜರುಗಿದ 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಅನೇಕರಿಗೆ ರಸ್ತೆ ಸುರಕ್ಷತೆಯ ತಿಳುವಳಿಕೆ ಇಲ್ಲದೆ ಇರುವುದರಿಂದ ದಿನನಿತ್ಯ ಅನೇಕ ರಸ್ತೆ ಅಪಘಾತಗಳು ಸಂಭವಿಸಿ ಸಾವು ನೋವಾಗುತ್ತವೆ.
ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಬಳಸುವ ವಾಹನದ ಕಾಗದಪತ್ರಗಳನ್ನು ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.
ಆರ್ ಟಿ ಒ ಕಛೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲಕುಮಾರ ಉಮರಾಣಿ ಮಾತನಾಡಿ ಶಾಲಾ ಕಾಲೇಜು ಮಕ್ಕಳು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುವುದರಿಂದ ಅವರ ಕುಟುಂಬದವರಿಗೂ ತಿಳಿ ಹೇಳಲು ಸಾಧ್ಯವಾಗುತ್ತದೆ. ಶಾಲಾ ಕಾಲೇಜುಗಳ ಮಹಿಳಾ ಸಿಬ್ಬಂದಿ ಬೈಕ್ ಗಳ ಮೇಲೆ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವಾಗ ಮಕ್ಕಳ ಸುರಕ್ಷತಾ ಬೆಲ್ಟ್ ಹಾಕಿಕೊಂಡು ಬರಬೇಕೆಂದು ಅವರು ಹೇಳಿದರು.
ಸಾನ್ವಿ ಮೋಟಾರ್ ವಾಹನ ತರಬೇತಿಯ ಶಾಲೆಯ ಮುಖ್ಯಸ್ಥ ಸಿದ್ದು ಹಂಡಗಿ, ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಚಿದಾನಂದ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಮುಖ್ಯಶಿಕ್ಷಕಿ ಚೇತನಾ ಪಾಟೀಲ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳು ಅಧಿಕಾರಿಗಳಿಂದ ರಸ್ತೆ ಸುರಕ್ಷತೆಯ ವಿವಿಧ ಮಾಹಿತಿ ಪಡೆದರು.
ಸತ್ತಿ ಗ್ರಾಮದ ಪಾಟೀಲ ಪಬ್ಲಿಕ್ ಶಾಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಮಾಸಚರಣೆ ಕಾರ್ಯಕ್ರಮವನ್ನು ಅಥಣಿ ಆರ್ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದು ಹಂಡಗಿ, ಚೇತನಾ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಇತರರು ಇದ್ದರು.



