Friday, July 17, 2026
23.9 C
Belagavi

ಅಥಣಿ ಜೀವ ಅತ್ಯಮೂಲ್ಯ ರಸ್ತೆ ನಿಯಮ ಪಾಲಿಸಿ

advertisement

spot_img

ಅಥಣಿ _ಪ್ರತಿಯೊಬ್ಬರ ಜೀವ ಅತ್ಯಮೂಲ್ಯ, ತಮ್ಮ ಕುಟುಂಬದ ಸದಸ್ಯರ ಗೋಸ್ಕರ ಪ್ರತಿಯೊಬ್ಬ ನಾಗರಿಕರು ರಸ್ತೆ ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಅಥಣಿ ಆರ್‌ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಹೇಳಿದರು.
ತಾಲೂಕಿನ ಸತ್ತಿ ಗ್ರಾಮದ ಪಾಟೀಲ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ, ಶ್ರೀ ಬಾಳಕೃಷ್ಣ ಮಹಾರಾಜ ಸಂಸ್ಕೃತ ಪಾಠ ಶಾಲೆಯ ಹಾಗೂ ಅಥಣಿ ಆರ್ ಟಿ ಒ ಇಲಾಖೆಯ ಸಯೋಗದಲ್ಲಿ ಶುಕ್ರವಾರ ಜರುಗಿದ 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಅನೇಕರಿಗೆ ರಸ್ತೆ ಸುರಕ್ಷತೆಯ ತಿಳುವಳಿಕೆ ಇಲ್ಲದೆ ಇರುವುದರಿಂದ ದಿನನಿತ್ಯ ಅನೇಕ ರಸ್ತೆ ಅಪಘಾತಗಳು ಸಂಭವಿಸಿ ಸಾವು ನೋವಾಗುತ್ತವೆ.ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಬಳಸುವ ವಾಹನದ ಕಾಗದಪತ್ರಗಳನ್ನು ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಆರ್ ಟಿ ಒ ಕಛೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲಕುಮಾರ ಉಮರಾಣಿ ಮಾತನಾಡಿ ಶಾಲಾ ಕಾಲೇಜು ಮಕ್ಕಳು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುವುದರಿಂದ ಅವರ ಕುಟುಂಬದವರಿಗೂ ತಿಳಿ ಹೇಳಲು ಸಾಧ್ಯವಾಗುತ್ತದೆ. ಶಾಲಾ ಕಾಲೇಜುಗಳ ಮಹಿಳಾ ಸಿಬ್ಬಂದಿ ಬೈಕ್ ಗಳ ಮೇಲೆ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವಾಗ ಮಕ್ಕಳ ಸುರಕ್ಷತಾ ಬೆಲ್ಟ್ ಹಾಕಿಕೊಂಡು ಬರಬೇಕೆಂದು ಅವರು ಹೇಳಿದರು.

ಸಾನ್ವಿ ಮೋಟಾರ್ ವಾಹನ ತರಬೇತಿಯ ಶಾಲೆಯ ಮುಖ್ಯಸ್ಥ ಸಿದ್ದು ಹಂಡಗಿ, ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಚಿದಾನಂದ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಮುಖ್ಯಶಿಕ್ಷಕಿ ಚೇತನಾ ಪಾಟೀಲ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳು ಅಧಿಕಾರಿಗಳಿಂದ ರಸ್ತೆ ಸುರಕ್ಷತೆಯ ವಿವಿಧ ಮಾಹಿತಿ ಪಡೆದರು.ಸತ್ತಿ ಗ್ರಾಮದ ಪಾಟೀಲ ಪಬ್ಲಿಕ್ ಶಾಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಮಾಸಚರಣೆ ಕಾರ್ಯಕ್ರಮವನ್ನು ಅಥಣಿ ಆರ್ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದು ಹಂಡಗಿ, ಚೇತನಾ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಇತರರು ಇದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img