ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ – MB ಪಾಟೀಲ್ ಕಿಡಿ!
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ ಮಂಡಿನೆ ಮಾಡಿದ್ದು, ಈ ಬೆನ್ನಲ್ಲೇ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ. ಜನ ಸಾಮಾನ್ಯರ ನಿರೀಕ್ಷೆಗಳನ್ನು ಬಜೆಟ್ ಈಡೇರಿಸಿಲ್ಲ, ಆದಾಯ ತೆರಿಗೆ ಮಿತಿಯನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ ಎಂದು ಕಿಡಿ ಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಎಂಬಿ ಪಾಟೀಲ್ ಮಾತನಾಡಿ, ಡಾಲರ್ ಮುಂದೆ ನಮ್ಮ ಭಾರತದ ರೂಪಾಯಿ ಕರೆನ್ಸಿ ಕುಸಿದಿದೆ. ದೇಶದ ಸಾಲ ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿದೆ, ದೇಶದ ತಲಾ ಆದಾಯ ಕೂಡ ಕಡಿಮೆ ಆಗುತ್ತಿದೆ ಎಂದಿದ್ದಾರೆ.
ಮೋದಿ ಸರ್ಕಾರದಲ್ಲಿ ಕೇವಲ ಘೋಷಣೆಗಳನ್ನು ಮಾಡಲಾಗ್ತಿದೆ, ರೈಲ್ವೇ ಹೊರತುಪಡಿಸಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಎಂಬಿ ಪಾಟೀಲ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.



