Tuesday, February 10, 2026
22.1 C
Belagavi

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

advertisement

spot_img

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಭವಿಷ್ಯದ ಚಾಂಪಿಯನ್ ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.
ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್ ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್ ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯ ಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಹೇಳಿದರು.
ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಬೆ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img