ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ಜುನಿಪೇಟ( ಕಿಲ್ಲಾ ತೊರಗಲ್) ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿಯ ಭೀಮಮಾರ್ಗ ಪದಾಧಿಕಾರಿಗಳು ಗ್ರಾಮ ಪಂಚಾಯತ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಧಾಖಲೆಗಳ ನಿರಂತರವಾಗಿ ಪಂಚಾಯತಿಯಲ್ಲಿ ತಿದ್ದುಪಡಿ ಸೇರಿದಂತೆ ಭ್ರಷ್ಟಾಚಾರ ನಡೆಯುತ್ತಲೇ ಇದ್ದು, ಪಂಚಾಯತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ದಲಿತ ಕಾಲೋನಿಗೆ ಗ್ರಾಮ ಪಂಚಾಯತಿಯಿಂದ ದೊರೆಯಬೇಕಾದ ಸೌಲಭ್ಯಗಳು ಮರಿಚಿಕೆಯಾಗಿದವೇ. ಪರಿಶಿಷ್ಟರ ಕಾಲೋನಿ ಅಭಿವೃದ್ಧಿಗೆ ಕ್ರಮ ತೆಗೆದುಕೊಂಡಿಲ್ಲ. 15ನೇ ಹಣಕಾಸು ಯೋಜನೆ ಅಡಿಯಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗಿದೆ. ಎನ್ ಎಂಆರ್ ಹಾಕಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗ್ರಾಮ ಪಂಚಾಯತಿಯಲ್ಲಿ ದಲಿತರ ಆಸ್ತಿಗಳು ಸೇರಿದಂತೆ ಅನೇಕ ಆಸ್ತಿ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿದೆ. ತಿದ್ದುಪಡಿಗಳನ್ನು ಪ್ರಶ್ನಿಸಿ ಅನೇಕರು.
ತಾಲೂಕಾ ಪಂಚಾಯತ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನೋಂದವರಿಗೆ ನ್ಯಾಯ ಸಿಗಬೇಕು. ಭ್ರಷ್ಟಾಚಾರ ನಿಲ್ಲಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪೂರ, ಪ್ರತಿಭಟನಾಕಾರರದಿಂದ ಮನವಿ ಸ್ವೀಕರಿಸಿ ಮಾತನಾಡಿ, ತಮ್ಮ ಆರೋಪ ಹಾಗೂ ಬೇಡಿಕೆಗಳನ್ನು ಪರಿಶೀಲನೆ ನಡೆಸುತ್ತೇನೆ. ನನ್ನ
ವ್ಯಾಪ್ತಿಯ ಸಮಸ್ಯೆಗಳನ್ನು ಪರಿಹರಿಸಿ, ತಾವು ಮಾಡಿದ ಆರೋಪಗಳಲ್ಲಿ ತಪ್ಪು ಕಂಡುಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ ನಂತರ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಹಿಂಪಡೆದುಕೊಂಡರು.
ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕರಾದ ಸಂಜಯ್ ಕಾಂಬಳೆ ರಾಜ್ಯ ಸಮಿತಿ ಸದಸ್ಯರಾದ ಚಿದಾನಂದ ತಾಲೂಕ ಸಂಚಾಲಕರಾದ ರಾಜಕುಮಾರ್ ಚಲವಾದಿ ಲಕ್ಷ್ಮಿ ನಾಗಣ್ಣವರ್ ಕೃಷ್ಣ ಸಾಲಿಮನಿ ದುರ್ಗಪ್ಪ ಮೇಲಿನಮನಿ ನೂರಾರು ಡಿಎಸ್ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.



