Tuesday, February 10, 2026
31.1 C
Belagavi

ಉಸಿರಾಟದ ಸಮಸ್ಯೆಯಿದ್ದರೂ ಕುಗ್ಗದ ಭಕ್ತಿ! ಆಕ್ಸಿಜನ್ ಸಿಲಿಂಡರ್ ಜೊತೆ ಚಿಂಚಲಿ ಮಾಯಕ್ಕನ ದರ್ಶನ ಪಡೆದ ದಂಪತಿ.

advertisement

spot_img

ಉಸಿರಾಟದ ಸಮಸ್ಯೆಯಿದ್ದರೂ ಕುಗ್ಗದ ಭಕ್ತಿ! ಆಕ್ಸಿಜನ್ ಸಿಲಿಂಡರ್ ಜೊತೆ ಚಿಂಚಲಿ ಮಾಯಕ್ಕನ ದರ್ಶನ ಪಡೆದ ದಂಪತಿ.

​ಆಂಕರ್ ದೈವ ಭಕ್ತಿ ಎನ್ನುವುದು ಎಂತಹ ಕಷ್ಟವನ್ನಾದರೂ ಮೆಟ್ಟಿ ನಿಲ್ಲುವ ಶಕ್ತಿ ನೀಡುತ್ತದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಅನಾರೋಗ್ಯ, ಉಸಿರಾಟದ ಸಮಸ್ಯೆ ಇದ್ದರೂ ಲೆಕ್ಕಿಸದೆ, ಆಕ್ಸಿಜನ್ ಸಿಲಿಂಡರ್ ಅಳವಡಿಸಿಕೊಂಡೇ ದಂಪತಿಯೊಬ್ಬರು ಸುಪ್ರಸಿದ್ಧ ಚಿಂಚಲಿ ಮಾಯಕ್ಕ ದೇವಿಯ ದರ್ಶನ ಪಡೆದಿದ್ದಾರೆ. ಈ ಅಪರೂಪದ ಹಾಗೂ ಭಕ್ತಿಪರವಶದ ಕ್ಷಣಗಳಿಗೆ ಸಾಕ್ಷಿಯಾಯ್ತು ಚಿಂಚಲಿ ಕ್ಷೇತ್ರ.​ಅನಾರೋಗ್ಯ, ಉಸಿರಾಟದ ಸಮಸ್ಯೆ ಇದ್ದರೂ ಲೆಕ್ಕಿಸದೆ, ಆಕ್ಸಿಜನ್ ಸಿಲಿಂಡರ್ ಅಳವಡಿಸಿಕೊಂಡೇ ದಂಪತಿಯೊಬ್ಬರು ಗಡಿನಾಡು ಶಕ್ತಿ ದೇವತೆ ಬಂಡಾರ ಒಡತಿ ಚಿಂಚಲಿ ಮಾಯಕ್ಕ ದೇವಿಯ ದರ್ಶನ ಪಡೆದಿರುವ ಅಪರೂಪ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಐತಿಹಾಸಿಕ ಚಿಂಚಲಿ ಮಾಯಕ್ಕ ದೇವಿಯ ಸನ್ನಿಧಿಯಲ್ಲಿ ಇಂದು ಭಕ್ತಿಯ ಪರಾಕಾಷ್ಠೆಯೊಂದು ಕಂಡುಬಂತು. ಸಾಮಾನ್ಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೇ ದೇವಸ್ಥಾನಕ್ಕೆ ಹೋಗಲು ಹಿಂದೇಟು ಹಾಕುವವರ ಮಧ್ಯೆ, ಮಹಾರಾಷ್ಟ್ರ ಪಂಡರಪುರ ಈ ದಂಪತಿಗಳ ಭಕ್ತಿ ಎಲ್ಲರ ಗಮನ ಸೆಳೆದಿದೆ. ​ತೀವ್ರವಾದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪತಿಯು, ಮೂಗಿಗೆ ಆಕ್ಸಿಜನ್ ಪೈಪ್ ಅಳವಡಿಸಿಕೊಂಡು, ಒಂದು ಕೈಯಲ್ಲಿ ಆಕ್ಸಿಜನ್ ಸಿಲಿಂಡರ್ ಹಿಡಿದುಕೊಂಡೇ ದೇವಿಯ ಸನ್ನಿಧಿಗೆ ಆಗಮಿಸಿದ್ದರು. ಇವರಿಗೆ ಸಾಥ್ ನೀಡಿದ ಪತ್ನಿ, ಹೆಜ್ಜೆ ಹೆಜ್ಜೆಗೂ ಪತಿಯನ್ನು ಜಾಗರೂಕತೆಯಿಂದ ಕರೆತಂದು ಗಡಿನಾಡು ಶಕ್ತಿ ದೇವತೆ ಮಾಯಕ್ಕನ ದರ್ಶನ ಮಾಡಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆಗೆ ದಂಪತಿ ಆಗಮಿಸಿ ದೇವರ ಮೇಲಿನ ನಂಬಿಕೆ ಇದ್ದರೆ ರೋಗ-ರುಜಿನಗಳು ಅಡ್ಡಿಯಾಗುವುದಿಲ್ಲ” ಎಂಬ ಮಾತನ್ನು ಈ ದಂಪತಿಗಳು ಅಕ್ಷರಶಃ ಪಾಲಿಸಿದ್ದಾರೆ. ಆಕ್ಸಿಜನ್ ಸಹಾಯವಿಲ್ಲದೆ ಉಸಿರಾಡಲು ಕಷ್ಟವಾಗುವ ಪರಿಸ್ಥಿತಿಯಲ್ಲೂ, ಮಾಯಕ್ಕನ ಮೇಲಿನ ಅಪಾರ ನಂಬಿಕೆಯಿಂದ ಅವರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಈ ದೃಶ್ಯವನ್ನು ಕಂಡ ಭಕ್ತರು ದಂಪತಿಗಳ ದೈವಭಕ್ತಿಗೆ ಕೈ ಮುಗಿದಿದ್ದಾರೆ.
ದೇವಿಯ ಉತ್ಸವ ಒಂದುವಾರ ಇರುವ ಮೊದಲೇ ಇವರಿಗೆ ಅನಾರೋಗ್ಯ ಕಾಡಿದೆ, ಕಳೆದ ಐದಾರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವಾಡಿಕೆಯಂತೆ ಪ್ರತಿ ವರ್ಷ ದೇವಿಯ ದರ್ಶನ ಪಡೆಯುವುದು ಇವರ ಮನೆತನದ ಪರಂಪರೆಯಾಗಿದ್ರಿಂದ ಆರೋಗ್ಯವನ್ನು ಲೆಕ್ಕಿಸದೆ ದೇವಿಯ ದರ್ಶನವನ್ನು ಪಡೆದಿದ್ದೇವೆ ನಮಗೆ ದೇವಿಯ ದರ್ಶನ ಪಡೆದು ಊರಿಗೆ ಹಿಂದಿರುಗುತ್ತಿದ್ದೇವೆ, ವೈದರು ಕೂಡ ಯಾವುದೇ ಸಮಸ್ಯೆ ಇಲ್ಲ ಹೋಗಿ ಬನ್ನಿ ಅಂತ ಹೇಳಿದರು ಇದರಿಂದ ದೇವರಿಗೆ ಬಂದಿದ್ದೇವೆ ಎಂದು ಅನಾರೋಗ್ಯ ಮಹಿಳೆಯ ಪತಿ ಸ್ಥಳೀಯರಿಗೆ ವಿವರಿಸಿದ್ದರು

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img