Tuesday, February 10, 2026
27.1 C
Belagavi

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

advertisement

spot_img

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ

ನಂಬಿಕೆ ನಕ್ಷೆ ಯೋಜನೆ; 12 ಸಾವಿರ ನಕ್ಷೆ ಹಂಚಿಕೆ

17 ಸಾವಿರ ನಿವೇಶನ ಭೂ ಮಾಲೀಕರಿಗೆ ಹಂಚಿಕೆ

“ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಖಾತೆ ಪರಿವರ್ತನೆ ಮಾಡಿಸಿಕೊಂಡವರಿಗೆ ಸೋಮವಾರ ಖಾತಾ ಪತ್ರ ವಿತರಣೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.

“ಆಸ್ತಿ ದಾಖಲೆಗಳ ಡಿಜಿಟಲೀಕರಣ ಈ ವರ್ಷದ ಪ್ರಮುಖ ತೀರ್ಮಾನ. ಏಕೆಂದರೆ ಕಳೆದ 50 ವರ್ಷಗಳಿಂದಲೂ ಇದು ಮುನ್ನೆಲೆಗೆ ಬಂದಿರಲಿಲ್ಲ. ಈ ಹಿಂದೆ ಕೃಷಿ ಭೂಮಿ ಡಿಜಿಟಲೀಕರಣಕ್ಕೆ ಭೂಮಿ ಯೋಜನೆ ತರಲಾಗಿತ್ತು. ನಮ್ಮ ಬೆಂಗಳೂರಿನ ಎಲ್ಲಾ ಆಸ್ತಿ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಇ – ಖಾತೆ ವ್ಯವಸ್ಥೆ ತರಬೇಕು ಎಂದು ಹೊರಟಿದ್ದೇವೆ. ಈ ಮೂಲಕ ತೆರಿಗೆ ಸೋರಿಕೆ ತಡೆಯಬೇಕು ಎಂಬುದು ನಮ್ಮ ಉದ್ದೇಶ. ಸಬ್‌ ರಿಜಿಸ್ಟಾರ್‌ ಕಚೇರಿಗಳಲ್ಲಿ ಕಾವೇರಿ ಸಾಫ್ಟ್‌ ವೇರ್‌ ತಂದು ಇದನ್ನು ಪರಶೀಲನೆ ಮಾಡಲು ಅವಕಾಶ ನೀಡಿದ್ದೇವೆ. ಇದರ ಜೊತೆಗೆ ಪ್ರತಿಯೊಂದು ದಾಖಲೆಗಳು ಆಧಾರ್‌ ಜೊತೆ ಲಿಂಕ್‌ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದರು.

“ಯಾರು ಸಹ ಒಂದೇ ಒಂದು ರೂಪಾಯಿ ಲಂಚ ನೀಡದೆ ಇ ಖಾತೆ ಪಡೆಯಬಹುದು. ಮನೆ ಬಾಗಿಲಿಗೆ ಖಾತೆ ತಲುಪಿಸಬೇಕು ಎಂದು ತಿಳಿಸಿದ್ದೇನೆ. ನನಗೆ ನನ್ನ ಜೀವನದಲ್ಲಿ ಸಮಾಧಾನ ನೀಡಿದ ದೊಡ್ಡ ತೀರ್ಮಾನ. ಎಷ್ಟೋ ಜನಕ್ಕೆ ಅವರ ಆಸ್ತಿಗಳು ಯಾರ ಹೆಸರಿನಲ್ಲಿ ಇದೆ ಎಂದು ಗೊತ್ತಿರಲಿಲ್ಲ. ಈ ಕೆಲಸ ನೋಡಿ ಕೇಂದ್ರ ಸರ್ಕಾರ ನಮ್ಮ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿದೆ” ಎಂದು ಹೇಳಿದರು.

15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ

“ಯೂನಿಫಾರ್ಮ್‌ ಲ್ಯಾಂಡ್‌ ರೆಕಾರ್ಡ್‌ ಮ್ಯಾನೇಜ್‌ ಮೆಂಟ್‌ ಸಿಸ್ಟಮ್‌ ಮೂಲಕ ಬಿ ಖಾತೆ ಮೂಲಕ ಎ ಖಾತೆ ನೀಡುವ ಯೋಜನೆ ಇದಾಗಿದೆ. ಈಗಾಗಲೇ 7 ಸಾವಿರ ಅರ್ಜಿಗಳು ಇದಕ್ಕೆ ಬಂದಿವೆ. ಇದಕ್ಕೆ ಇನ್ನೂ ಲಕ್ಷಗಟ್ಟಲೆ ಅರ್ಜಿಗಳು ಬರಬೇಕಿದೆ. ಈಗಾಗಲೇ ಅರ್ಜಿ ಹಾಕಿರುವವರಿಗೆ 15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ ಮಾಡಲು ಸಮಯ ನಿಗದಿ ಮಾಡಿದ್ದೇವೆ. ಅಧಿಕಾರಿಗಳು ಖಾತೆ ನೀಡುವಾಗ ಸ್ಥಳ ಪರಿಶೀಲನೆ ಮಾಡಲಿದ್ದಾರೆ” ಎಂದರು.

“ಇನ್ನೂ ಅನೇಕರು ಸೇಲ್‌ ಡೀಡ್‌ ಇಟ್ಟುಕೊಂಡು ಖಾತೆಯನ್ನೇ ಹೊಂದಿಲ್ಲ. 1.20 ಲಕ್ಷ ಜನ ಈ ಬಗ್ಗೆ ಅರ್ಜಿ ನೀಡಿದ್ದಾರೆ. 60 ಸಾವಿರ ಜನರ ಅರ್ಜಿ ಒಪ್ಪಿತವಾಗಿದೆ. 40 ಸಾವಿರ ಅರ್ಜಿ ರದ್ದಾಗಿದೆ. 15 ಸಾವಿರ ಅರ್ಜಿಗಳು ವಿವಿಧ ಹಂತದಲ್ಲಿವೆ. ಅರ್ಜಿಗಳು ಏಕೆ ತಿರಸ್ಕೃತವಾಗಿವೆ ಎಂದು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುತ್ತಿದೆ” ಎಂದರು.

ನಂಬಿಕೆ ನಕ್ಷೆ ಯೋಜನೆ; 12 ಸಾವಿರ ನಕ್ಷೆ ಹಂಚಿಕೆ

“ನಂಬಿಕೆ ನಕ್ಷೆ ಯೋಜನೆಯಡಿ 12 ಸಾವಿರ ನಕ್ಷೆಗಳನ್ನು ನೀಡಲಾಗಿದೆ. ಇದರಿಂದ ಭ್ರಷ್ಟಾಚಾರ ನಿಂತಿದೆ. ಕೆಲಸದ ವೇಗ ಹೆಚ್ಚಿದೆ. ನಾಗರಿಕ ಸ್ನೇಹಿ ವಾತಾವರಣ ಉಂಟಾಗಿದೆ. ಓಟಿಎಸ್‌ ಯೋಜನೆಯ ಅಡಿ ದಂಡ ಹಾಗೂ ಬಡ್ಡಿಯನ್ನು ರದ್ದು ಮಾಡಲಾಯಿತು. ಇದರಿಂದ 2 ಲಕ್ಷ ಜನರಿಗೆ ಅನುಕೂಲವಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ 1,200 ಕೋಟಿ ಹಣ ಸಂಗ್ರಹವಾಗಿದೆ. ಟಿಡಿಆರ್‌ ಅಡಿ ಬೆಂಗಳೂರು ಬಿಜಿನೆಸ್‌ ಕಾರಿಡಾರ್‌ ಯೋಜನೆಗೆ ಎಂದು ಭೂಮಿ ಕಳೆದುಕೊಂಡವರಿಗೆ ಹೆಚ್ಚು ಅನುಕೂಲವಾಗಲಿದೆ” ಎಂದು ಹೇಳಿದರು.

“ನಾವು ಜಾರಿಗೆ ತಂದಿದ್ದ ಪ್ರಿಮೀಯಂ ಎಫ್‌ ಎಆರ್‌ ಅನ್ನು ರಾಜ್ಯಪಾಲರು ತಡೆ ನೀಡಿದರು. ಬಿಜೆಪಿ ಸಮಯದಲ್ಲಿ ತಂದಿದ್ದ ಕಾನೂನನ್ನೇ ನಾನು ಜಾರಿಗೆ ತಂದಿದ್ದೇವೆ. ಒಂದಷ್ಟು ಜನ ಇದರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈಗ ಅಲ್ಲಿಂದಲೂ ವಾಪಸ್‌ ಕಳುಹಿಸಿದ್ದಾರೆ. ಒಂದಷ್ಟು ಜನ ಪ್ರಿಮೀಯಂ ಎಫ್‌ ಎಆರ್‌ ಅನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ 1 ಸಾವಿರ ಕೋಟಿ ಬರುವ ನಿರೀಕ್ಷೆಯಿದೆ” ಎಂದರು.

“ಬಿ ಸ್ಮೈಲ್‌ ಎನ್ನುವ ಕಂಪೆನಿಯನ್ನು ಕಳೆದ ವರ್ಷ ಪ್ರಾರಂಭ ಮಾಡಲಾಯಿತು. ಒಟ್ಟು 1.47 ಲಕ್ಷ ಕೋಟಿಯಷ್ಟು ಹೂಡಿಕೆಯನ್ನು ಬಿ ಸ್ಮೈಲ್‌ ಅಲ್ಲಿ ಮಾಡಲಾಗಿದೆ. ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಬಿಡಿಎಗೂ ಸಹ ಒಂದಷ್ಟು ಜವಾಬ್ದಾರಿ ನೀಡಲಾಗಿದೆ. 1.5 ಕಿಮೀ ಉದ್ದದ ಕಟ್‌ ಅಂಡ್‌ ಕವರ್‌ ಟನಲ್‌, ಮೇಖ್ರಿ ವೃತ್ತದ ಬಳಿ ವಾಹನ ದಟ್ಟಣೆ ತಪ್ಪಿಸಲು ಯೋಜನೆ ಮಾಡಲಾಗುವುದು. ಬ್ರಾಂಡ್‌ ಬೆಂಗಳೂರು ಅಡಿ ಬೀದಿ ದೀಪ, ನಗರ ಸೌಂದರ್ಯೀಕರಣವನ್ನು ಯಾವ ರೀತಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಲಾಗುವುದು. ವೈಟ್‌ ಟಾಪಿಂಗ್ ಕಾಮಗಾರಿಯನ್ನು ನಾನೇ ಖುದ್ದಾಗಿ ಪರಿಶೀಲನೆ ಮಾಡಿದ್ದೇನೆ. 1,700 ಕೋಟಿ ರೂ. ವೆಚ್ಚದ 150 ಕಿಲೋ ಮೀಟರ್‌ ಉದ್ದದ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಎರಡನೇ ಹಂತದಲ್ಲಿ 7,500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. 690 ಕೋಟಿ ವೆಚ್ಚದಲ್ಲಿ ಬ್ಲಾಕ್‌ ಟಾಪಿಂಗ್‌ ಕಾಮಗಾರಿ ಪ್ರಾರಂಭವಾಗಲಿದೆ” ಎಂದರು.

“110 ಹಳ್ಳಿಗಳಿಗೆ ಕಾವೇರಿ ನೀರನ್ನು 2007 ರಿಂದ ನೀಡಲು ಆಗಿರಲಿಲ್ಲ. ಈ ಕೆಲಸವನ್ನು ನಾವು ಮಾಡಿದ್ದೇವೆ. 775 ಎಂಎಲ್‌ ಡಿ ನೀರನ್ನು ಈಗಾಗಲೇ ನೀಡಿದ್ದೇವೆ. ಇದಕ್ಕೆ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಮನೆ ಮನೆಗೆ ಟ್ಯಾಂಕರ್‌ ಮೂಲಕ ಕಾವೇರಿ ನೀರು ನೀಡಲಾಗಿದೆ. ಸರಳ ಕಾವೇರಿ ಯೋಜನೆ ಮೂಲಕ ರಿಯಾಯಿತಿ ದರ ಹಾಗೂ ಕಂತುಗಳ ಮೂಲಕ ಹಣ ಪಾವತಿಗೆ ಅವಕಾಶ ನೀಡಿ ಕಾವೇರಿ ನೀರು ನೀಡಲಾಗಿದೆ” ಎಂದರು.

“ಕೆ.ಆರ್‌ ಪುರಂ ನಿಂದ ಮೈಸೂರು ರಸ್ತೆ ವರೆಗಿನ ಟನಲ್‌ ರಸ್ತೆ ಯೋಜನೆಯ ಡಿಪಿಆರ್‌ ಪ್ರಗತಿಯ ಹಂತದಲ್ಲಿದೆ. ಬೆಂಗಳೂರು ಬಿಜಿನೆಸ್‌ ಕಾರಿಡಾರ್‌ ಯೋಜನೆ ಅಡಿ ಭೂಮಿ ಕಳೆದುಕೊಂಡವರಿಗೆ ಪರಿಹಾರವನ್ನು ಇಡೀ ದೇಶದಲ್ಲಿ ಯಾರೂ ಸಹ ನೀಡದಷ್ಟು ಪರಿಹಾರವನ್ನು ನೀಡಲಾಗಿದೆ. ಈ ಯೋಜನೆಯನ್ನು ಮೊದಲೇ ಮಾಡಿದ್ದರೆ 4-5 ಸಾವಿರ ಕೋಟಿಗೆ ಮುಗಿದು ಹೋಗುತ್ತಿತ್ತು. ಈಗ ನಾನು ನೋಡಿರುವ ಪರಿಹಾರ ನೋಡಿ ಸಂತ್ರಸ್ತರು ಸಂತೋಷದಿಂದ ಪರಿಹಾರ ತೆಗೆದುಕೊಳ್ಳುತ್ತಿದ್ದಾರೆ. 3 ಕೋಟಿಯಿಂದ 10-15 ಕೋಟಿ ಪರಿಹಾರವನ್ನು ಒಬ್ಬೊಬ್ಬರು ತೆಗೆದುಕೊಳ್ಳುತ್ತಿದ್ದಾರೆ. ಮೊದಲನೇ ಹಂತದಲ್ಲಿ 129 ಕಿಮೀ ಇರಲಿದೆ. ಎರಡನೇ ಹಂತದ ರಸ್ತೆ ಎಲೆಕ್ಟ್ರಾನಿಕ್‌ ಸಿಟಿಯಿಂದ ಮೈಸೂರು ರಸ್ತೆವರೆಗೆ ಇರಲಿದೆ” ಎಂದರು.

“9 ಸಾವಿರ ಕೋಟಿ ವೆಚ್ಚದ 44 ಕಿ.ಮೀ. ಉದ್ದದ ಡಬಲ್‌ ಡೆಕ್ಕರ್‌ ಯೋಜನೆಯ ಡಿಪಿಆರ್‌ ಸಿದ್ಧವಿದೆ. ಇದಕ್ಕೆ ಸದ್ಯದಲ್ಲೇ ಟೆಂಡರ್‌ ಕರೆಯಲಾಗುವುದು. ರಾಜಕಾಲುವೆಗಳ ಬಫರ್‌ ಜೋನ್‌ ಗಳ ಪಕ್ಕ ರಸ್ತೆ ನಿರ್ಮಾಣ ಕಾರ್ಯ ಮೂರು ಕಡೆ ಪ್ರಾರಂಭವಾಗಿದೆ. ಮಿಲಿಟರಿಯವರು ನೀಡಿದ ಜಾಗಕ್ಕೆ ಒಂದಷ್ಟು ಮೂಲಸೌಕರ್ಯಗಳನು ಒದಗಿಸಿಕೊಡಬೇಕು ಎಂದು ಹೇಳಿದ್ದಾರೆ ನಾವು ಮಾಡುತ್ತಿದ್ದೇವೆ. ಬೀದಿ ಬದಿ ವ್ಯಾಪಾರಿಗಳಿಗೆ 50 ಕೋಟಿ ಹಣ ರೂ. ಮೀಸಲು ಇಡಲಾಗಿದೆ” ಎಂದರು.

17 ಸಾವಿರ ನಿವೇಶನ ಭೂ ಮಾಲೀಕರಿಗೆ ಹಂಚಿಕೆ

“ಶಿವರಾಂ ಕಾರಂತ್ ಬಡಾವಣೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ ಎಂದು ನ್ಯಾಯಲಯ ತಿಳಿಸಿದೆ. 34,977 ನಿವೇಶನ ಮಾಡಲಾಗಿದೆ. 17 ಸಾವಿರ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಬೇಕು. ಶೇ 75 ಭಾಗ ಮಾಲೀಕರು ಇದಕ್ಕೆ ತಯಾರಿದ್ದಾರೆ. ಮಿಕ್ಕ ಮಾಲೀಕರ ಬಳಿ ನಾನು ಮನವಿ ಮಾಡುತ್ತಿದ್ದೇನೆ. ಬಿಡಿಎಗೆ 50 ವರ್ಷ ತುಂಬುತ್ತಿದ್ದು 17 ಸಾವಿರ ಜನರಿಗೂ ಒಂದೇ ದಿನ ಹಂಚಿಕೆ ಮಾಡುವ ಕಾರ್ಯಕ್ರಮ ನಡೆಸಲಾಗುವುದು. ಮಿಕ್ಕ ನಿವೇಶನಗಳಿಗೆ ಅರ್ಜಿ ಕರೆದು ನೀಡಲಾಗವುದು. ಸ್ಕೈ ಡೆಕ್‌ ಬಗ್ಗೆ ಬಿಡಿಎಗೆ ಜವಾಬ್ದಾರಿ ನೀಡಿದ್ದೇನೆ. ಕೆಂಪೇಗೌಡ ಲೇಔಟ್‌ ಬಳಿ ಪರಿಶೀಲನೆ ಮಾಡಲಾಗುತ್ತಿದೆ” ಎಂದರು.

“ಜಿಬಿಎ ಐದು ಪಾಲಿಕೆಗಳ ಚುನಾವಣೆ ಮಾಡಬೇಕು ಎಂದು ನಾವು ಮುಂದಾಗಿದ್ದೇವೆ. ವಾರ್ಡ್‌ ಗಳ ವಿಂಗಡೆಯಾಗಿದೆ, ಮೀಸಲಾತಿ ಕೂಡ ಮುಗಿದಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡಿ ಎಂದೂ ತಿಳಿಸಲಾಗಿದೆ. ನ್ಯಾಯಲಯಕ್ಕೂ ಅಫಿಡವಿಟ್‌ ಸಲ್ಲಿಕೆ ಮಾಡಲಾಗಿದೆ. ನ್ಯಾಯಲಯವೂ ನಮಗೆ ಮಾಗದರ್ಶನ ನೀಡಿದೆ” ಎಂದರು.

54 ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರುವ ಬಗ್ಗೆ ಕೇಳಿದಾಗ, “ಪಕ್ಷವನ್ನು ಅಧಿಕಾರಕ್ಕೆ ತಂದವರಿಗೆ ಅಧಿಕಾರ ಕೊಡುವುದರಲ್ಲಿ ತಪ್ಪೇನಿದೆ. ಈ ಹಿಂದೆ ಬಿಜೆಪಿಯವರು ಯಾರಿಗೆಲ್ಲಾ ಅಧಿಕಾರ ಕೊಟ್ಟಿದ್ದಾರೆ ಎಂದು ಗೊತ್ತಿದೆ. ನಮಗೆ ಅವರೇ ಮಾದರಿ. ಅವರು ನಮ್ಮ ಕಾರ್ಯಕರ್ತರು. ಅವರಿಗೆ ಅಧಿಕಾರ ನೀಡಿರುವುದರಲ್ಲಿ ತಪ್ಪೇನು ಇಲ್ಲ” ಎಂದು ಸರ್ಮರ್ಥಿಸಿಕೊಂಡರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ – ಮೂವರು ಕೂಲಿ ಕಾರ್ಮಿಕರು ದು*ರ್ಮರಣ!

ಕೋಲಾರದಲ್ಲಿ ಭೀ*ಕರ ರಸ್ತೆ ಅಪಘಾತ - ಮೂವರು ಕೂಲಿ ಕಾರ್ಮಿಕರು ದು*ರ್ಮರಣ! ಭೀಕರ...
spot_img

Related Articles

Popular Categories

spot_img