ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ. ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಇಂದು ಕೂಡ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳೊಂದಿಗೆ ಮಹತ್ವದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ನಿನ್ನೆ 10ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಮಾಲೋಚನೆ ನಡೆಸಿರುವ ಸಿಎಂ, ಇಂದು ಬಾಕಿ ಇರುವ ಇಲಾಖೆಗಳ ಬೇಡಿಕೆ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಶಕ್ತಿ ಭವನದಲ್ಲಿ ಇಂದು ಬೆಳಗ್ಗೆ 11:30 ರಿಂದ ಸರಣಿ ಸಭೆಗಳು ಆರಂಭವಾಗಲಿವೆ.
ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಕೃಷಿ ಇಲಾಖೆ, ವಾರ್ತಾ – ಸಾರ್ವಜನಿಕ ಸಂಪರ್ಕ ಇಲಾಖೆ, ಜವಳಿ – ಮಾರುಕಟ್ಟೆ ಇಲಾಖೆ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು, ಆಯುಕ್ತರು, ಎಂಡಿಗಳು ಭಾಗಿಯಾಗಲಿದ್ದಾರೆ.



