Monday, June 1, 2026
26.1 C
Belagavi

ಅಥಣಿ: ನಂದೇಶ್ವರ ಗಡಾಮ ಮುತ್ಯಾನ ಮಹಿಮೆ ಅಪಾರ

advertisement

spot_img

ನಂದೇಶ್ವರ ಗಡಾಮ ಮುತ್ಯಾನ ಮಹಿಮೆ ಅಪಾರ

ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಸತ್ಕಾರ್ಯಗಳೇ ಶಾಶ್ವತವಾಗಿ ಉಳಿಯುತ್ತವೆ. ಪುಣ್ಯ ಕ್ಷೇತ್ರ ನಂದೇಶ್ವರ ಗ್ರಾಮದ ಸಿದ್ದಿ ಪುರುಷ ಗಡಾಮ ಮುತ್ಯಾನ ಮಹಿಮೆ ಅಪಾರವಾಗಿದೆ. ಗಡಾಮ ಮುತ್ಯಾನ ಮಹಿಮೆಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕೆಂದು ಮನಕವಾಡ ಮಹಾಮಠದ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನಂದೇಶ್ವರ ಗ್ರಾಮದಲ್ಲಿ ಜರುಗಿದ ಗಡಾಮ ಮುತ್ಯಾನ ಜಾತ್ರಾ ಮಹೋತ್ಸವದ ಆಧ್ಯಾತ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡುತ್ತಾ ಮನುಷ್ಯ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಪರೋಪಕಾರಿ ಬದುಕಬೇಕು. ಬದುಕಿದ್ದಾಗಲೇ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಆರೋಗ್ಯವೇ ನಿಜವಾದ ಭಾಗ್ಯವಾಗಿದೆ. ಇಂದಿನ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತ್ಯಂತ ಮುಖ್ಯವಾಗಿದೆ. ವ್ಯಕ್ತಿಯೂ ಮರಣದ ಹೊಂದಿದ ನಂತರವೂ ಎಲ್ಲರ ಹೃದಯದಲ್ಲಿ ಗಡಾಮ ಮುತ್ಯಾನ ಹಾಗೆ ಶಾಶ್ವತವಾಗಿ ಉಳಿಯುವಂತೆ ಬದುಕಬೇಕೆಂದು ಅವರು ಹೇಳಿದರು. ಹೆಬ್ಬಾಳಟ್ಟಿ ಚಂದ್ರಗಿರಿ ಮಠದ ಶ್ರೀ ಸಿದ್ಧಲಿಂಗಯ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸಾವಳಗಿ ಶ್ರೀ ಪರಶುರಾಮ ಸ್ವಾಮೀಜಿ, ಗಡಾಮ ಮುತ್ಯಾ ವಂಶಸ್ಥ ಬಸಪ್ಪ ಚಂಡಕಿ, ಪೆಟ್ಲುರದ ಶ್ರೀ ಪರಶುರಾಮ ಸ್ವಾಮೀಜಿ, ಹಿರಿಯ ಮುಖಂಡ ರಾಮೇಶಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಲಾಲಸಿಂಗಿ, ಚಿಕ್ಕ ಮಕ್ಕಳ ವೈದ್ಯ ಡಾ. ಸಿ. ಎ. ಸಂಕ್ರಟ್ಟಿ, ರಾಮಣ್ಣ ದೇವನ್ನವರ, ಬಸಪ್ಪ ಮುಧೋಳ, ಸುರೇಶಗೌಡ ಪಾಟೀಲ, ಗುರುಲಿಂಗ ತೇಲಿ, ಬುಜಬಲಿ ಪರಟಿ, ಮಹಾಂತೇಶ ಚಂಡಕಿ, ವಿರುಪಾಕ್ಷ ಹಿರೇಮಠ, ಭೀಮಗೊಂಡ ಪಾಟೀಲ, ಚಿದಾನಂದ ಬಡಿಗೇರ, ಅದೃಶಿ ಪಾಟೀಲ, ಹಣಮಂತ ಹಳಿಂಗಳಿ, ಬಸಪ್ಪ ಬಿರಡಿ, ಹನಮಂತ ಬಡಿಗೇರ, ಧರೆಪ್ಪ ಮಗದುಮ್ಮ, ಪಿ.ಬಿ. ಜನವಾಡ, ಕಾಡಪ್ಪ ತೇಲಿ, ಸಿದ್ದಪ್ಪ ಬಳವಾಡ, ಸಿದ್ದಲಿಂಗ ಚಂಡಿಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿವಿಧ ಸಮಾಜ ಸೇವಕರನ್ನು ಗೌರವಿಸಿ ಸತ್ಕರಿಸಲಾಯಿತು. ಎಸ್ .ಬಿ. ಲಾಲಸಿಂಗಿ ನಿರೂಪಿಸಿದರು, ಚಿದಾನಂದ ಪಾಟೀಲ ಸ್ವಾಗತಿಸಿದರು, ಎಲ್ಲರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
12 ಎನ್ ಡಿ ಆರ್ ಫೊಟೋ ಶಿರ್ಷಿಕೆ 1 ನಂದೇಶ್ವರ ಗ್ರಾಮದಲ್ಲಿ ಜರುಗಿದ ಗಾಡಾಮ ಮುತ್ಯಾನ ಜಾತ್ರೆಯ ಉತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಉದ್ಘಾಟಿಸಿದರು. ಇತರರು ಇದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img