Friday, July 17, 2026
20.9 C
Belagavi

ಅಥಣಿ: ನಂದೇಶ್ವರ ಗಡಾಮ ಮುತ್ಯಾನ ಮಹಿಮೆ ಅಪಾರ

advertisement

spot_img

ನಂದೇಶ್ವರ ಗಡಾಮ ಮುತ್ಯಾನ ಮಹಿಮೆ ಅಪಾರ

ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಸತ್ಕಾರ್ಯಗಳೇ ಶಾಶ್ವತವಾಗಿ ಉಳಿಯುತ್ತವೆ. ಪುಣ್ಯ ಕ್ಷೇತ್ರ ನಂದೇಶ್ವರ ಗ್ರಾಮದ ಸಿದ್ದಿ ಪುರುಷ ಗಡಾಮ ಮುತ್ಯಾನ ಮಹಿಮೆ ಅಪಾರವಾಗಿದೆ. ಗಡಾಮ ಮುತ್ಯಾನ ಮಹಿಮೆಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕೆಂದು ಮನಕವಾಡ ಮಹಾಮಠದ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನಂದೇಶ್ವರ ಗ್ರಾಮದಲ್ಲಿ ಜರುಗಿದ ಗಡಾಮ ಮುತ್ಯಾನ ಜಾತ್ರಾ ಮಹೋತ್ಸವದ ಆಧ್ಯಾತ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡುತ್ತಾ ಮನುಷ್ಯ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಪರೋಪಕಾರಿ ಬದುಕಬೇಕು. ಬದುಕಿದ್ದಾಗಲೇ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಆರೋಗ್ಯವೇ ನಿಜವಾದ ಭಾಗ್ಯವಾಗಿದೆ. ಇಂದಿನ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತ್ಯಂತ ಮುಖ್ಯವಾಗಿದೆ. ವ್ಯಕ್ತಿಯೂ ಮರಣದ ಹೊಂದಿದ ನಂತರವೂ ಎಲ್ಲರ ಹೃದಯದಲ್ಲಿ ಗಡಾಮ ಮುತ್ಯಾನ ಹಾಗೆ ಶಾಶ್ವತವಾಗಿ ಉಳಿಯುವಂತೆ ಬದುಕಬೇಕೆಂದು ಅವರು ಹೇಳಿದರು. ಹೆಬ್ಬಾಳಟ್ಟಿ ಚಂದ್ರಗಿರಿ ಮಠದ ಶ್ರೀ ಸಿದ್ಧಲಿಂಗಯ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸಾವಳಗಿ ಶ್ರೀ ಪರಶುರಾಮ ಸ್ವಾಮೀಜಿ, ಗಡಾಮ ಮುತ್ಯಾ ವಂಶಸ್ಥ ಬಸಪ್ಪ ಚಂಡಕಿ, ಪೆಟ್ಲುರದ ಶ್ರೀ ಪರಶುರಾಮ ಸ್ವಾಮೀಜಿ, ಹಿರಿಯ ಮುಖಂಡ ರಾಮೇಶಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಲಾಲಸಿಂಗಿ, ಚಿಕ್ಕ ಮಕ್ಕಳ ವೈದ್ಯ ಡಾ. ಸಿ. ಎ. ಸಂಕ್ರಟ್ಟಿ, ರಾಮಣ್ಣ ದೇವನ್ನವರ, ಬಸಪ್ಪ ಮುಧೋಳ, ಸುರೇಶಗೌಡ ಪಾಟೀಲ, ಗುರುಲಿಂಗ ತೇಲಿ, ಬುಜಬಲಿ ಪರಟಿ, ಮಹಾಂತೇಶ ಚಂಡಕಿ, ವಿರುಪಾಕ್ಷ ಹಿರೇಮಠ, ಭೀಮಗೊಂಡ ಪಾಟೀಲ, ಚಿದಾನಂದ ಬಡಿಗೇರ, ಅದೃಶಿ ಪಾಟೀಲ, ಹಣಮಂತ ಹಳಿಂಗಳಿ, ಬಸಪ್ಪ ಬಿರಡಿ, ಹನಮಂತ ಬಡಿಗೇರ, ಧರೆಪ್ಪ ಮಗದುಮ್ಮ, ಪಿ.ಬಿ. ಜನವಾಡ, ಕಾಡಪ್ಪ ತೇಲಿ, ಸಿದ್ದಪ್ಪ ಬಳವಾಡ, ಸಿದ್ದಲಿಂಗ ಚಂಡಿಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿವಿಧ ಸಮಾಜ ಸೇವಕರನ್ನು ಗೌರವಿಸಿ ಸತ್ಕರಿಸಲಾಯಿತು. ಎಸ್ .ಬಿ. ಲಾಲಸಿಂಗಿ ನಿರೂಪಿಸಿದರು, ಚಿದಾನಂದ ಪಾಟೀಲ ಸ್ವಾಗತಿಸಿದರು, ಎಲ್ಲರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
12 ಎನ್ ಡಿ ಆರ್ ಫೊಟೋ ಶಿರ್ಷಿಕೆ 1 ನಂದೇಶ್ವರ ಗ್ರಾಮದಲ್ಲಿ ಜರುಗಿದ ಗಾಡಾಮ ಮುತ್ಯಾನ ಜಾತ್ರೆಯ ಉತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಉದ್ಘಾಟಿಸಿದರು. ಇತರರು ಇದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img