Monday, March 2, 2026
33.2 C
Belagavi

ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ:ಬಸವರಾಜ ಬೊಮ್ಮಾಯಿ

advertisement

spot_img

ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ:ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಹಿಂದುಳಿದವರಿಗೆ ಏನು ಮಾಡಿದ್ದಾರೆನ್ನುವ ಲೆಕ್ಕ ಕೊಡಲಿ:ಬಸವರಾಜ ಬೊಮ್ಮಾಯಿ

ಹಾವೇರಿ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯಿಸುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಜನರು ಬಂದಿರುತ್ತಾರೆ. ಹೀಗಾಗಿ ಅದರಲ್ಲಿ ಯಾವುದೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಕೇಸ್ ಹಾಕಿದ್ದಾರೆ. ತನಿಖೆ ನಂತರ ಸತ್ಯಾ ಸತ್ಯತೆ ಹೊರ ಬರುತ್ತದೆ. ಒಬ್ಬ ಯುವ ವೈದ್ಯರು ಒಳ್ಳೆಯ ಕೆಲಸ ಮಾಡುತ್ತಿರುವಾಗ ಒಂದು ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಿದೆ. ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ಭಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯ ಮಾಡುತ್ತೇನೆ. ಯಾವುದೇ ಒಬ್ಬರ ಸಾರ್ವಜನಿಕರ ಜೀವನವನ್ನು ಪಡ್ಯಂತ್ರದಿಂದ ಮುಗಿಸುವ ಕೆಲಸವನ್ನು ಯಾರೂ ಪೋತ್ಸಾಹ ಮಾಡಬಾರದು ಖಂಡಿಸಬೇಕು ಎಂದು ಹೇಳಿದರು.

ಗುತ್ತಿಗೆದಾರರ ಸಂಘದವರು ಮಾಡಿರುವ ಕಮಿಷನ್ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಕಾಂಗ್ರೆಸ್ ನಾಟಕ ಬಟಾ ಬಯಾಗಿದೆ. ಗುತ್ತಿಗೆದಾರರ ಸಂಘ ಒಂದೇ ಅಲ್ಲ. ಬೆಸ್ಕಾಂ ಗುತ್ತಿಗೆದಾರರ ಸಂಘ, ಪಿಡಬ್ಲ್ಯುಡಿ ಸಂಘ, ಎಲ್ಲ ಗುತ್ತಿಗೆದಾರರ ಸಂಘದವರು ಪತ್ರಿಕಾ ಗೋಷ್ಠಿ ಮಾಡಿ ಕಮಿಷನ್ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ನವರಿಗೆ ಈ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಸಿಎಂ ಲೆಕ್ಕ ಕೊಡಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ತಮಗೆ ಅನ್ಯಾಯ ಮಾಡಲಾಗುತ್ತಿದೆ ಎನ್ನುವ ದೃಷ್ಠಿಯಲ್ಲಿ ಮಾಡಿರುವ ಅಭಿಪ್ರಾಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ. ರಾಜಕೀಯ ಬೆಳವಣಿಗೆಯನ್ನು ಯಾರೂ ಸಹಿಸುತ್ತಿಲ್ಲ ಅಂತ ಹೇಳುತ್ತಿದ್ದಾರೆ. ಅವರು ಸಿಎಂ ಆಗಿ ದೇವರಾಜ ಅರಸು ಅವರ ಅವಧಿಯ ದಾಖಲೆಯನ್ನು ಮೀರಿದ್ದಾರೆ. ಏಳು ವರ್ಷ ಅಧಿಕಾರ ಅನುಭವಿಸಿದ್ದಾರೆ. ಅತಿ ಹೆಚ್ಚು ಅವಧಿ ಅಧಿಕಾರ ಅನುಭವಿಸಿದವರೇ ಅನ್ಯಾಯ ಆಗಿದೆ ಅಂದರೆ ಏನು? ಅವರ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ, ಪರಿಶಿಷ್ಟ ವರ್ಗದವರಿಗೆ ಏನು ಮಾಡಿದ್ದಾರೆ ಅನ್ನುವುದನ್ನು ಸಿದ್ದರಾಮಯ್ಯ ಲೆಕ್ಕಾ ಕೊಡಬೇಕು. ಅವರು ಲೆಕ್ಕ ಕೊಡುವ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ಎಸ್ಸಿಗಳಿಗೆ ಸಿಎಂ ಸ್ಥಾನ ಕೊಡಬೇಕು ಅನ್ನುವ ಮಾತನಾಡುತ್ತಾರೆ. ಸಿದ್ದರಾಮಯ್ಯ, ಮಹದಾದೇವಪ್ಪ ಕಾಂಗ್ರೆಸ್‌ಗೆ ಆಮದಾದವರು. ಬಸವಲಿಂಗಪ್ಪ, ರಂಗನಾಥವರು, ಖರ್ಗೆಯವರು ಬಹಳಷ್ಟು ಘಟಾನುಘಟಿಗಳು ಕಾಂಗ್ರೆಸ್‌ ಗೆ ಬೆಂಬಲ ಕೊಡುತ್ತ ಬಂದಿದ್ದಾರೆ. ಎಪ್ಪತ್ತೈದು ವರ್ಷಗಳಿಂದ ದಲಿತರು ಕಾಂಗ್ರೆಸ್‌ ಗೆ ಬೆಂಬಲ ನೀಡುತ್ತ ಬಂದಿದ್ದಾರೆ. ದಲಿತರ ಋಣದಲ್ಲಿ ಇರುವಂತ ಕಾಂಗ್ರೆಸ್‌ನವರು ಅವರನ್ನು ಸಿಎಂ ಮಾಡಬೇಕು. ನಿಜವಾಗಲು ರಾಜಕೀಯ ಬದ್ಧತೆ ಇದ್ದರೆ, ಕಾಂಗ್ರೆಸ್ ದಲಿತರ ಹಕ್ಕನ್ನು ಕೊಡಬೇಕು. ಅದು ಭಿಕ್ಷೆಯಲ್ಲ. ದಲಿತರಿಗೆ ಮೂಗಿಗೆ ತುಪ್ಪ ಸವರುವ ಮೂಲಕ ದಲಿತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಸ್ಪಿ ವರ್ಗಾವಣೆ ಮಾಡಬೇಕು

ಬಾಗಲಕೋಟೆಯಲ್ಲಿ ನಡೆದ ಗಲಾಟೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗಲಾಟೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ. ಮಸೂತಿಯಿಂದ ಕಲ್ಲು, ಚಪ್ಪಲಿ ಬಿದ್ದಿದೆ. ಅದನ್ನು ಯಾರು ಮಾಡಿದ್ದಾರೆ. ಪೊಲಿಸರು ಒಂದು ಸೈಡ್ ಬಂಧನ ಮಾಡುವುದು. ಪ್ರಮುಖರನ್ನು ಬಿಟ್ಟು ಬಂಧನ ಮಾಡುವುದು. ಪಿತೂರಿ ಹಿಂದಿರುವವರನ್ನು ಬಿಟ್ಟು ಇತರರನ್ನು ಬಂಧಿಸಿದರೆ ಪಿತೂರಿ ಮಾಡುವವರು ಮುಂದೆಯೂ ಮಾಡುತ್ತಾರೆ ತುಷೀಕರಣ ಮಾಡುವ ಮೂಲಕ ಹಿಂದೂಗಳ ಹಬ್ಬ, ಮೆರವಣಿಗೆ, ಶಿವಾಜಿ ಜಯಂತಿ.. ಗಣೇಶ ಜಯಂತಿ ಕಾರ್ಯಕ್ರಮಗಳಲ್ಲಿ ನಿರಂತರ ಗಲಾಟೆ ಮಾಡಿಸುವುದು ನಡೆಯುತ್ತಿದೆ. ಬಾಗಲಕೋಟೆ ಎಸ್ಪಿಗೆ ಏಟು ಬಿದ್ದು ರಕ್ತ ಬರುತ್ತಿದ್ದರೂ ನನಗೇನು ಆಗಿಲ್ಲ ಎಂದು ಹೇಳುತ್ತಾರೆ. ಮೊದಲು ಅಲ್ಲಿನ ಎಸ್ಪಿ ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳನ್ನು ವರ್ಗ ಮಾಡಬೇಕು ಎಂದು ಆಗ್ರಹಿಸಿದರು.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img