Friday, July 17, 2026
22 C
Belagavi

ಭಾರತೀಯ ಕಿಸಾನ್ ಸಂಘದಿಂದ ಗೋಮಾಳು ಜಮೀನು ಸಂರಕ್ಷಣೆ ಮಾಡುವಂತೆ ಮನವಿ

advertisement

spot_img

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿರುವ ಗೋಮಾಳ ಜಮೀನು ಸಂರಕ್ಷಣೆ ಮಾಡಲು ತಾಲೂಕಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ರೈತ ಮುಖಂಡರು ತಾಲೂಕ ದಂಡಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿರುವ ಗೋಮಾಳ, ಗೈರಾಣ ಜಮೀನುಗಳನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ಕೇಳಿ ಬರುತ್ತಿದೆ.

ಆದರೆ ಗೋಮಾಳ ಜಮೀನುಗಳು ಪೂರ್ವಜರ ಕಾಲದಿಂದಲೂ ಗೋವುಗಳು ಮೇಯಲು ಸಹಕಾರಿಯಾಗಿದ್ದವು ಸರಕಾರಿ, ಗೋಮಾಳ, ಗೈರಾಣ ಭೂಮಿಯನ್ನು ಇತರ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಜಾನುವಾರುಗಳು ಮೇಯಲು ಭೂಮಿ ಇಲ್ಲದಂತಾಗಿ ಅವುಗಳ ಸಂಖ್ಯೆ ದಿನೇ ದಿನೇ ಕುಸಿಯುತ್ತಲೇ ಇದೆ. ಸಾವಯವ ಕೃಷಿಗೆ ಗೋವು, ಜಾನುವಾರುಗಳು ಅಗತ್ಯವಿದ್ದು, ಗೋಮಾಳ ಜಮೀನಿನಲ್ಲಿ ಮಳೆಗಾಲದಲ್ಲಿ ಬೆಳೆದ ಮೇವುಗಳನ್ನು ಗೋವುಗಳು ಮೇಯ್ದು ಉತ್ತಮ ಗೊಬ್ಬರ, ಜೀವಾಮೃತಗಳನ್ನು ನೀಡುತ್ತಿದ್ದವು. ಇಂದು ಗೋಮಾಳ ಜಮೀನು ಬೇರೆ ಉದ್ದೇಶಕ್ಕೆ ನೀಡಿದ್ದು, ಜಾನುವಾರುಗಳ ಮೇಯಲು ಇಲ್ಲದಂತಾಗಿದೆ. ಶೀಘ್ರದಲ್ಲಿ ಬೇರೆ ಉದ್ದೇಶಗಳಿಗೆ ನೀಡಲಾದ ಗೋಮಾಳ ಜಮೀನುಗಳನ್ನು ವಾಪಸ್ ಪಡೆಯಬೇಕು. ಜಾನುವಾರುಗಳ ಮೇಯಲು ಭೂಮಿ ದೊರೆಯುವಂತೆ ಕ್ರಮ ತೆಗೆರೆದುಕೊಳ್ಳಬೇಕು. ಅಂತಹ ಗೋಮಾಳದಲ್ಲಿ ಪರಸರ ಸಂರಕ್ಷಣೆಗಾಗಿ ನಮ್ಮ ಸಂಘದಿಂದ ಸಸಿಗಳನ್ನು ನೆಡಲು ಯೋಜನೆ ಹಾಕಿಕೊಳ್ಳುತ್ತಿದೆ ಎಂದು ಅವರು ಮನವಿ ಮೂಲಕ ಆಗ್ರಹಿಸಿದ್ದಾರೆ.ಮನವಿ ಸ್ವೀಕರಿಸಿ ಮಾತನಾಡಿದ ಗ್ರೇಡ್-2 ತಹಶೀಲ್ದಾರ ಸಂಜಯ ಖಾತೆದಾರ, ತಮ್ಮ ಮನವಿಯನ್ನು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ತಾಲೂಕಾಧ್ಯಕ್ಷ ಸುರೇಶ ನಂದೆಪ್ಪನವರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕೋಣನ್ನವರ, ತಾಲೂಕಾ ಕಾರ್ಯದರ್ಶಿ ಪವನ ಅಂಗಡಿ, ಎಸ್.ಎಸ್. ಹಿರೇಮಠ, ಶಿವನಗೌಡ ಕುಲಕರ್ಣಿ, ಮಹಿಳಾ ಪ್ರತಿನಿಧಿ ಸುಮಿತ್ರಾ ಹಣಮನೇರಿ, ಕಾಳಮ್ಮ ಬಡಿಗೇರ, ನಿಂಗಪ್ಪ ಗುದಗಿ, ಯಲ್ಲಪ್ಪ ಜಾಧವ, ಸಿದ್ದು ಹಂಪಿಹೊಳಿ, ಅಪ್ಪು ಪಾಟೀಲ, ತಿರಕಪ್ಪ ಬಾಡಗಾರ ಸೇರಿದಂತೆ ಮತ್ತಿತರರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img