ಸರ್ಕಾರಿ ಉತ್ತನಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಕೆರೆಗೆ ನೀರು ಬರುವ ಸಂಪರ್ಕವನ್ನು ಮಾಡಿಲ್ಲ ಎಂದು ಗ್ರಾಮಸ್ಥರು ವಿಧಾನ ಪರಿಷತ್ ಸದಸ್ಯ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರಲ್ಲಿ ದೂರು ನೀಡಿದರು
ತಾಂಡವಪುರ ಮಾರ್ಚ್ 2 ಮೈಸೂರ್ ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ಪಟ್ಟಣ ಪಂಚಾಯಿತಿ ವತಿಯಿಂದ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ನಮ್ಮ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿರುವ ಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಮಾರು ನಾಲ್ಕು ಕೋಟಿಗಳು ಹೆಚ್ಚು ಅನುದಾನವನ್ನು ಕೆರೆ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದ್ದು ಕೆರೆ ಹೂಳೆತ್ತುವ ಕೆಲಸ ಸಮರ್ಪಕವಾಗಿ ನಡೆದಿಲ್ಲ ಜೊತೆಗೆ ಸಮೀಪದ ವರುಣ ಉಪಕಾಲವೆಯಿಂದ ಕೆರೆಗೆ ಸಂಪರ್ಕ ಮಾಡಿ ನೀರು ಬರುವಂತೆ ಮಾಡಬೇಕು ಎಂದು ಹೇಳಲಾಗಿತ್ತು ಆದರೆ ಆ ಕೆಲಸವನ್ನು ಮಾಡಿಲ್ಲ ಎಂದು ಗ್ರಾಮಸ್ಥರು ವಿಧಾನ ಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾಕ್ಟರ ಯತೀಂದ್ರ ಸಿದ್ರಾಮಯ್ಯನವರಲ್ಲಿ ಮನವಿ ನೀಡುವ ಮೂಲಕ ದೂರು ಸಲ್ಲಿಸಿದರು
ಇದೇ ವೇಳೆ ಮಾತನಾಡಿದ ಗ್ರಾಮ ಪಂಚಾಯತಿ ಮಾಹಿತಿ ಸದಸ್ಯ ಶಿವ ಬೀರವರು ಕೆರೆ ಅಭಿವೃದ್ಧಿಯಾದರೆ ಸುತ್ತಮುತ್ತಲ ಜಮೀನುಗಳಿಗೆ ಮತ್ತು ಗ್ರಾಮಗಳ ಕೊಳವೆ ಬಾವಿಗಳಿಗೆ ಜಲ ಸಂಪರ್ಕ ಸಿಗುವಂತಾಗುತ್ತದೆ ಆದ್ದರಿಂದ ಕೆರೆಯ ಊಳನ್ನು ಸಮರ್ಪಕವಾಗಿ ತೆಗೆದು ವರುಣ ಉಪಕಾಲವೆಯಿಂದ ಕೆರೆಗೆ ನೀರು ಬರುವಂತೆ ಮಾಡಿಕೊಡಿ ಎಂದು ಯತೀಂದ್ರ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು
ಸಾರ್ವಜನಿಕರ ಮನವಿ ಹವಾಲು ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಸರ್ಕಾರಿ ಉತ್ತನಹಳ್ಳಿ ಗ್ರಾಮಕ್ಕೆ ಹಲವಾರು ಬಾರಿ ಭೇಟಿ ಮಾಡಿದ್ದೇನೆ ನಿಮ್ಮ ಸಮಸ್ಯೆಗಳನ್ನು ಆಲಿಸಿದ್ದೇನೆ ಅದೇ ರೀತಿ ಇವತ್ತು ಕೂಡ ನಿಮ್ಮ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಗಳ ಸಮಸ್ಯೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಮ್ಮ ಜೊತೆಗೆ ತಾಲೂಕಿನ ಎಲ್ಲಾ ಅಧಿಕಾರಿಗಳನ್ನು ಕರೆದುಕೊಂಡು ಬಂದಿದ್ದೇವೆ ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿ ಕೊಳ್ಳುವ ನೀರಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ ಅವರು ಕೆರೆ ಅಭಿವೃದ್ಧಿ ಕುರಿತು ಮಾಹಿತಿ ಪಡೆದುಕೊಂಡು ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಕೆರೆಯ ಸಂಪೂರ್ಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಗ್ರಾಮಸ್ಥರಿಗೆ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಭರವಸೆ ನೀಡಿದರು
ಜೊತೆಗೆ ಈ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸು ಬರುವಂತೆ ಮಾಡಿಕೊಡಿ ಎಂದು ಕೇಳಿದ್ದೀರಿ ಅದನ್ನು ಸಹ ಮತ್ತೆ ವಿದ್ಯಾರ್ಥಿಗಳ ಸಾರ್ವಜನಿಕರ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಬಸ್ಸು ಬರುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ತಿಳಿಸಿದರು
ಅಲ್ಲದೆ ಈಗಾಗಲೇ ಗ್ರಾಮದಲ್ಲಿ ರಸ್ತೆ ಅಭಿವೃದ್ಧ ಮನವಿ ಮಾಡಿದ್ದೀರಿ ಅದ
ಈ ಸಂದರ್ಭದಲ್ಲಿ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ವರುಣಾ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೇ ಮಂಜುಳಾ ಮಂಜುನಾಥ್ ತಾಲೂಕು ದಂಡಾಧಿಕಾರಿ ಮಹೇಶ್ ಕುಮಾರ್ ಇಒ ಕೃಷ್ಣ ಆರ್ ಐ ಯೋಗೇಂದ್ರ ಕುಮಾರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಹಾಗೂ ತ್ರಿಪುರ ಸುಂದರಿ ಅಮ್ಮನವರ ದೇವಾಲಯದ ಧರ್ಮದರ್ಶಿಗಳು ಆದ ಕೆ ಶಿವಣ್ಣ ಉಪಾಧ್ಯಕ್ಷರಾದ ಕೆಎಂ ಶಿವಣ್ಣ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಬಿ ಶಿವಣ್ಣ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಶಿವಬೀರ ರಂಗಸ್ವಾಮಿ ಬಸವರಾಜು ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ, ವಿಜಯಕುಮಾರ ಆಪ್ತ ಸಹಾಯಕರಾದ ಶಿವ ಸ್ವಾಮಿ ಪ್ರದೀಪ್ ಮಹೇಶ್ ಹಾಗೂ ಮುಖಂಡರಾದ ಚೇತನ್ ಲಿಂಗರಾಜು ಮಹದೇವಸ್ವಾಮಿ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯದರ್ಶಿ ಸಕಳ್ಳಿ ಬಸವರಾಜು ಕಾನೂನು ಘಟಕದ ಎಂ ಸಿ ಹುಂಡಿ ಶಿವಪ್ರಸಾದ್ ಕೆ ಎಸ ಹುಂಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ನಂಜಯ್ಯ ಕೆಎಸ್ ರವಿ ಗ್ಯಾರಂಟಿ ಯೋಜನೆಗಳ ಸಮಿತಿಯ ರವಿ ಮೆಲ್ಲಳ್ಳಿ ಅಭಿ ಸಿದ್ದಯ್ಯ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮದ ಸಾರ್ವಜನಿಕರು ಹಾಜರಿದ್ದರು



