Saturday, April 11, 2026
28.1 C
Belagavi

ಗರ್ಭಿಣಿಯರನ್ನು 10 ನೇ ವಾರದಲ್ಲಿಯೇ ಕಡ್ಡಾಯ ನೋಂದಣಿ ಮಾಡಲಾಗುತ್ತಿದೆ: ದಿನೇಶ್ ಗುಂಡೂರಾವ್

advertisement

spot_img

*ಗರ್ಭಿಣಿಯರನ್ನು 10 ನೇ ವಾರದಲ್ಲಿಯೇ ಕಡ್ಡಾಯ ನೋಂದಣಿ ಮಾಡಲಾಗುತ್ತಿದೆ: ದಿನೇಶ್ ಗುಂಡೂರಾವ್

ಹೆಣ್ಣು ಭ್ರೂಣ ಹತ್ಯೆ ತಡೆಯಲು ಕೈಗೊಂಡ ಕ್ರಮಗಳ ಕುರಿತು ವಿಧಾನಪರಿಷತ್ ನಲ್ಲಿ ಉಮಾಶ್ರೀಯವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್

ಇದೊಂದು ಸಾಮಾಜಿಕ ಪಿಡುಗು. ಕಾನೂನು ಮಾಡುವುದರಿಂದ ಮಾತ್ರ ಇದನ್ನು ತಡೆಯಲು ಸಾಧ್ಯವಿಲ್ಲ. ಗಂಡುಮಕ್ಕಳಿಲ್ಲದಿದ್ದರೆ ನಮ್ಮ ಕುಲವೇ ಮುಗಿದು ಹೋಗುತ್ತದೆ. ಗಂಡು ಮಕ್ಕಳಿದ್ದರೆ ಮಾತ್ರ ನಮ್ಮ ವಂಶ ಬೆಳಗುತ್ತದೆ ಎನ್ನುವ ಭಾವನೆಗಳು ಕೆಲ ಪ್ರದೇಶದಲ್ಲಿ ಇದೆ. ಈಗಾಗಲೇ ಪಿಎನ್ ಟಡಿಟಿ ಸೇರಿದಂತೆ ಹಲವಾರು ಕಾನೂನುಗಳಿದೆ. ಬಾಲಿಕಾ ಸಾಪ್ಟವೇರ್ ಅಡಿ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ. ಈವರೆಗೆ 80 ಪ್ರಕರಣಗಳಲ್ಲಿ ದಂಡ ವಿಧಿಸಿ, 70 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈಗಾಗಲೇ 3 ವೈದ್ಯರು, 5 ನರ್ಸ್ ಗಳ ಮೇಲೆ FIR ದಾಖಲಿಸಲಾಗಿದೆ. ಗುಪ್ತ ಕಾರ್ಯಾಚರಣೆಯನ್ನು ಇಲಾಖೆಯ ಅಧಿಕಾರಿಗಳು ನಡೆಸುತ್ತಿದ್ದಾರೆ.

ನಮ್ಮ ಅಧಿಕಾರಿಗಳು ಅಲ್ಟ್ರಾಸೌಂಡ್ ಸೆಂಟರ್ ಗೆ ಹೋಗಿ ನಿಯಮಿತ ತಪಾಸಣೆ ನಡೆಸುತ್ತಾರೆ. ಭಾಗ್ಯಲಕ್ಷ್ಮಿ ಬಾಂಡ್, ಗೃಹಲಕ್ಷ್ಮೀ ಯಂತ ಯೋಜನೆಗಳ ಮೂಲಕ ಹೆಣ್ಣುಮಕ್ಕಳ ಕುರಿತು ಸಕಾರಾತ್ಮಕ ಭಾವನೆ ಮೂಡುವಂತೆ ಎಲ್ಲ ಸರ್ಕಾರಗಳು ಪ್ರಯತ್ನ ಮಾಡಿದೆ. ಮಹಿಳೆಯರಿಗೆ ಉಚಿತ ಶಿಕ್ಷಣ, ಎಲ್ಲ ಆದ್ಯತೆ ನೀಡುವ ಮೂಲಕ ಮಹಿಳೆಯರು ಸಾಮಾಜಿಕವಾಗಿ ಸಮಾನರು ಎನ್ನುವುದನ್ನು ಮನವರಿಕೆ ಮಾಡುತ್ತಿದ್ದೇವೆ. ಹೆಚ್ಚೆಚ್ಚು ಪರಿಣಾಮಕಾರಿ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಖಚಿತ ಮಾಹಿತಿ ಆಧರಿಸಿ ಏಳು ಕಡೆ ದಾಳಿ ನಡೆಸಿ ಕಾನೂನು ಪ್ರಕಾರ ಕೇಸ್ ದಾಖಲಿಸಲಾಗಿದೆ. ಪ್ರಕರಣಗಳು ನ್ಯಾಲಯದಲ್ಲಿದೆ. ಒಂದು ಲಕ್ಷ ಬಹುಮಾನ ಸಹ ಘೋಷಿಸಲಾಗಿತ್ತು. ಮೂರು ಜನರು ಸರಿಯಾದ ಮಾಹಿತಿ ನೀಡಿ ಬಹುಮಾನ ಪಡೆದಿದ್ದಾರೆ. ಲಿಂಗ ಪತ್ತೆ ಮಾಡುವ ಪ್ರಕ್ರಿಯೆ ಗರ್ಭ ದರಿಸಿ 12 ವಾರ ಕಳೆದ ನಂತರ ಮಾತ್ರ ಮಾಡಲಾಗುತ್ತದೆ. ಈವರೆಗೂ 12 ವಾರ ಆದ ನಂತರ AMC ರಿಜಿಷ್ಟ್ರೇಶನ್ ಮಾಡಲಾಗುತ್ತಿತ್ತು. ಈಗ ಬದಲಾವಣೆ ಮಾಡಿ 10 ನೇ ವಾರಕ್ಕೆ ರಿಜಿಷ್ಟ್ರೇಶನ್ ಮಾಡಲಾಗುತ್ತದೆ. ಇದರಿಂದ ಭ್ರೂಣ ಹತ್ಯೆ ತಡೆಯಲು ಸಹಾಯಕ. ಭ್ರೂಣ ಹತ್ಯೆ ತಡೆಯಲು ಎಲ್ಲ ಜಿಲ್ಲೆಗಳಲ್ಲಿ ಹಿರಿಯ ವೈದ್ಯರನ್ನು ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ.

ಸ್ಕ್ಯಾನಿಂಗ್ ಸೆಂಟರುಗಳು ಹೆಚ್ಚು ಇರುವುದರಿಂದ ಬೆಂಗಳೂರಿನಲ್ಲಿ 5 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ನಿಯಮಿತವಾಗಿ ಸ್ಕ್ಯಾನಿಂಗ್ ಸೆಂಟರ್ ತಪಾಸಣೆ ಮಾಡುತ್ತಾರೆ. ಈಗ ಮೋಬೈಲ್ ಅಲ್ಟ್ರಾಸೌಂಡ್ ಮಶಿನ್ ಬಂದು ಮತ್ತೊಂದಿಷ್ಟು ಸವಾಲು ಎದುರಾಗಿದೆ. ಹೀಗೆ ಸರ್ಜಾರ ಭ್ರೂಣ ಹತ್ಯೆ ತಡೆಯಲು ಜನಜಾಗೃತಿ, ಕಾನೂನಾತ್ಮಕ, ಇಲಾಖೆಯಿಂದ ಸದಾ ಜಾಗೃತವಾಗಿ ಪ್ರಯತ್ನಿಸುತ್ತಿದೆ.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img