Saturday, April 11, 2026
28.1 C
Belagavi

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, 

“ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ನ ಟಿ.ಎ. ಶರವಣ ಅವರು ಟಿಬಿ ಅಣೆಕಟ್ಟು ಕ್ರೇಸ್ಟ್ ಗೇಟ್ ಅಳವಡಿಕೆ ವಿಚಾರ ಪ್ರಸ್ತಾಪಿಸಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.“ಮಾನ್ಯ ಶರವಣ ಅವರು ಬಹಳ ಬುದ್ಧಿವಂತರು ಎಂದು ಭಾವಿಸಿದ್ದೆ. ಅವರು ತುಂಗಭದ್ರಾ ಗೇಟ್ ಅಳವಡಿಕೆ ವಿಚಾರವನ್ನು ಪ್ರಸ್ತಾಪಿಸಿ, ಬೆಂಗಳೂರಿನಲ್ಲಿ ಮನೆ ಹಂಚಿಕೆ, ಕೇರಳದಲ್ಲಿ ಮನೆ ನಿರ್ಮಾಣ ಸೇರಿದಂತೆ ಅನೇಕ ಬೇರೆ ಬೇರೆ ವಿಚಾರಗಳನ್ನು ಎಳೆದು ತಂದಿದ್ದಾರೆ. ಟಿಬಿ ಅಣೆಕಟ್ಟಿನ ಗೇಟ್ ಅಳವಡಿಕೆ ವಿಚಾರ ಬಹಳ ಗಂಭೀರವಾದದು. ಶರವಣ ಹಾಗೂ ಇತರ ಸದಸ್ಯರನ್ನು ನಾನು ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿ ಕೊಡುತ್ತೇನೆ, ಹೋಗಿ ನೋಡಲಿ. ಅಲ್ಲಿ ಕ್ರೆಸ್ಟ್ ಗೇಟ್ ತುಂಡರಿಸಿದಾಗ, ಅಣೆಕಟ್ಟು ಸಂಪೂರ್ಣ ಅಲ್ಲಾಡಿದಂತೆ ಭಾಸವಾಗಿತ್ತು. ನಾವು ಕೇವಲ 7 ದಿನಗಳಲ್ಲಿ ದುರಸ್ತಿ ಮಾಡಿದೆವು. ಆಗ ಜನಾರ್ದನ ರೆಡ್ಡಿ ಏನು ಹೇಳಿಕೆ ಕೊಟ್ಟಿದ್ದರು ಎಂಬುದು ಗೊತ್ತಿದೆ. ಆಗ ನಾನು ‘ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ’ ಎಂದು ಹೇಳಿದ್ದೆ. ನಂತರ ನಾವು ರಾಜ್ಯದ ಎಲ್ಲಾ ಅಣೆಕಟ್ಟುಗಳ ಅಧ್ಯಯನ ನಡೆಸಿ ಹಳೇ ಗೇಟ್ ಗಳ ಬದಲಾವಣೆಗೆ ತೀರ್ಮಾನ ಮಾಡಿದೆವು. ಮೊದಲ ಹಂತದಲ್ಲಿ ಟಿಬಿ ಡ್ಯಾಂ ಗೇಟ್ ಬದಲಿಸುತ್ತಿದ್ದೇವೆ. ಪತ್ರಿಕೆಯಲ್ಲಿ ಮಾರ್ಚ್ 10ರ ವೆರೆಗೆ 14 ಗೇಟ್ ಬದಲಿಸಲಾಗಿದ್ದು, ತಜ್ಞರ ಪ್ರಕಾರ ಒಂದು ಕ್ರೆಸ್ಟ್ ಗೇಟ್ ಅಳವಡಿಕೆಗೆ 7 ದಿನಗಳ ಕಾಲಾವಕಾಶ ಬೇಕು. ಹಲವು ಗೇಟ್ ಗಳ ಅಳವಡಿಕೆ ಕಾರ್ಯ ನಡೆದರೆ ಈ ಪ್ರಕ್ರಿಯೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

“ಅಧ್ಯಕ್ಷರೇ ನಾವು ಎಲ್ಲಾ ಗೇಟ್ ಬದಲಿಸುವ ತೀರ್ಮಾನ ಮಾಡಿದ್ದು, 19ನೇ ಸ್ಟಾಪ್ ಲಾಗ್ ಗೇಟ್ ತೆರವುಗೊಳಿಸಿ ಸ್ಪಿಲ್ ಗೇಟ್ ಅಳವಡಿಕೆಗೆ 2025 ಏಪ್ರಿಲ್ 24ರಂದು ಅಹಮದಾಬಾದಿನ ಹಾರ್ಡ್ ವೇರ್ ಟೂಲ್ ಅಂಡ್ ಮಷಿನರಿ ಪ್ರಾಜೆಕ್ಟ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. 34.48 ಕೋಟಿ ರೂ. ವೆಚ್ಚದಲ್ಲಿ ಉಳಿದ 32 ಸ್ಪಿಲ್ ವೇ ಗೇಟ್ ಅಳವಡಿಕೆಯನ್ನು 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಸಲು ಇದೇ ಸಂಸ್ಥೆಯೊಂದಿಗೆ ಜೂನ್ 10, 2025ರಲ್ಲಿ ಒಪ್ಪಂದ ಮಾಡಿಕೊಂಡಿದ್ದೇವೆ. 25 ಗೇಟ್ ಗಳ ಫ್ಯಾಬ್ರಿಕೇಶನ್ ಕೆಲಸ ಮುಗಿದಿದ್ದು, 2 ಗೇಟ್ ಗಳ ಕೆಲಸ ನಡೆಯುತ್ತಿದೆ. 26 ಗೇಟ್ ಗಳನ್ನು ತೆಗೆಯಲಾಗಿದ್ದು, 2 ಗೇಟ್ ಗಳ ತೆರವು ಕಾರ್ಯ ನಡೆಯುತ್ತಿದೆ. ಇದರಲ್ಲಿ 14 ಗೇಟ್ ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 3 ಗೇಟ್ ಗಳ ಕಾರ್ಯ ಪ್ರಕ್ರಿಯೆಯಲ್ಲಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಗೇಟ್ ಬದಲಾವಣೆ ಮುಗಿಸಲು ವ್ಯವಸ್ಥೆ ಮಾಡಲಾಗಿದೆ” ಎಂದು ವಿವರಿಸಿದರು.

ನವಲಿ: ಆಂಧ್ರ ಚರ್ಚೆಗೆ ಬರುತ್ತಿಲ್ಲ

“ಇನ್ನು ನವಲಿ ಸಮತೋಲಿತ ಜಲಾಶಯ ನಿರ್ಮಾಣ ವಿಚಾರದಲ್ಲಿ ಆಂಧ್ರ ಪ್ರದೇಶದವರು ಮಾತುಕತೆಗೆ ಬರುತ್ತಿಲ್ಲ. ಕೆಲವರು ಪರ್ಯಾಯ ಮಾರ್ಗಗಳ ಸಲಹೆ ನೀಡಿದ್ದು, ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ಸಮಯ ನೀಡುತ್ತಿಲ್ಲ. ಈ ಅಣೆಕಟ್ಟು ನಮ್ಮ ಆಸ್ತಿ. ಈ ವಿಚಾರದಲ್ಲಿ ಕೇವಲ ಕರ್ನಾಟಕ ಏಕಾಂಗಿಯಾಗಿ ನಿರ್ಧಾರ ಮಾಡಲು ಸಾಧ್ಯವಿಲ್ಲ. ಮೂರು ರಾಜ್ಯದವರು ಸೇರಿ ತೀರ್ಮಾನ ಮಾಡಬೇಕು. ನೀರು ಹರಿದು ಸಮುದ್ರಕ್ಕೆ ಹೋಗುತ್ತಿದೆ. ಇದನ್ನು ಉಳಿಸಿ ಜನರಿಗೆ ನೀಡಲು ನಿಮ್ಮೆಲ್ಲರ ರಾಜಕೀಯ ಬದ್ಧತೆ, ಶಕ್ತಿ ನೀಡಿದರೆ ನಾವು ವ್ಯವಸ್ಥೆ ಮಾಡಬಹುದು. ಗೇಟ್ ಬದಲಾವಣೆ ವಿಚಾರವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಬಿ.ಜಿ. ಪಾಟೀಲ್ ಅವರು ಹಿನ್ನೀರ ಭೂ ಸಂತ್ರಸ್ತರಿಗೆ ಪರಿಹಾರ ಮರೀಚಿಕೆ ವಿಚಾರವಾಗಿ ಪತ್ರಿಕೆಯಲ್ಲಿ ಬಂದಿರುವ ವರದಿ ಬಗ್ಗೆ ಕೇಳಿದಾಗ, “ಮಾನ್ಯ ಸದಸ್ಯರು ಪ್ರಸ್ತಾಪಿಸಿರುವಂತೆ ರೈತರಿಗೆ ಭೂ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಂದ ಕಡತ ತರಿಸಿಕೊಂಡು ಕೂಡಲೇ ಪರಿಹಾರ ಸಿಗುವಂತೆ ಮಾಡಲಾಗುವುದು” ಎಂದು ತಿಳಿಸಿದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img