Monday, June 1, 2026
26.1 C
Belagavi

ಬಿಜೆಪಿ ರಣತಂತ್ರ : ದಾವಣಗೆರೆ ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿ, ಬಾಗಲಕೋಟೆ ಯಾರಿಗೆ ಟಿಕೆಟ್?..

advertisement

spot_img

ಬಿಜೆಪಿ ರಣತಂತ್ರ : ದಾವಣಗೆರೆ ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿ, ಬಾಗಲಕೋಟೆ ಯಾರಿಗೆ ಟಿಕೆಟ್?..

ಬೆಂಗಳೂರು : ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳ ಕಾವು ಜೋರಾಗುತ್ತಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಹಾಲಿ ಶಾಸಕರ ನಿಧನದ ಬಳಿಕ ಎದುರಾಗಿರುವ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಇಂದು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಿಸಿದೆ.

ಪ್ರಮುಖವಾಗಿ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗೆ ಮಣೆ ಹಾಕಿದೆ. ಈ ಮೂಲಕ ದಲಿತರ ಪರ ಎನ್ನುವ ಕಾಂಗ್ರೆಸ್ ಗೆ ನೇರ ಚೆಕ್ ಮೆಟ್ ಇಡುವ ಕೆಲಸ ಮಾಡಿದೆ.ಬಿಜೆಪಿ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಘೋಷಿಸಿದೆ. ಈ ಮೂಲಕ ಎಸ್ಟಿ ಸಮುದಾಯದ ಯುವ ನಾಯಕನಿಗೆ ಅವಕಾಶ ನೀಡಿದೆ.

ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿರುವ ಶ್ರೀನಿವಾಸ್ ದಾಸಕರಿಯಪ್ಪ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದಶ್ವರರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ವಿಚಾರದಲ್ಲಿಯೂ ತುಟಿ ಬಿಚ್ಚಿ ರಲಿಲ್ಲ. ವಿರೋಧವೂ ವ್ಯಕ್ತಪಡಿಸಿರಲಿಲ್ಲ. ಜಿಲ್ಲೆಯಲ್ಲಿನ ರಾಜಕೀಯ ಕಿತ್ತಾಟದಲ್ಲಿ ಎಂಟ್ರಿಯಾಗದೆ ಪಕ್ಷದ ಕೆಲಸ ಮಾಡುತ್ತಿದ್ದ ಶ್ರೀನಿವಾಸಗೆ ಎರಡು ಬಣಗಳ ಜೊತೆ ಉತ್ತಮ ಒಡನಾಟವಿದೆ.

ಶ್ರೀನಿವಾಸ್ ದಾಸಕರಿಯಪ್ಪ ಅವರು 2023ರ ವಿಧಾನಸಭೆ ಚುನಾವಣೆ ವೇಳೆಯೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಭರ್ಜರಿ ಓಡಾಟ ನಡೆಸಿದ್ದರು. ಆದರೆ ಅಂತಿಮವಾಗಿ ಅಜಯ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಒಲಿದಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಡಾ. ಶಾಮನೂರು ಶಿವಶಂಕರಪ್ಪರು ಭರ್ಜರಿ ಜಯಭೇರಿ ಬಾರಿಸಿದ್ದರು..ಶ್ರೀನಿವಾಸ್ ದಾಸಕರಿಯಪ್ಪ ಅವರು ದಾಸಕರಿಯಪ್ಪ ಅವರ ಪುತ್ರ. ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದ ಅವರ ತಂದೆ ದಾಸಕರಿಯಪ್ಪ ಅವರು ಜೆಡಿಎಸ್ ನಲ್ಲಿ ಪ್ರಬಲ ನಾಯಕರಾಗಿದ್ದರು.
ಅವರ ಪುತ್ರನಿಗೆ ಮಣೆ ಹಾಕುವ ಮೂಲಕ ಬಿಜೆಪಿಯು ಹೊಸ ದಾಳ ಉರುಳಿಸಿದೆ.

ಡಾ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾದ ಈ ಕ್ಷೇತ್ರಕ್ಕೆ ಶ್ರೀನಿವಾಸ್ ದಾಸಕರಿಯಪ್ಪ ಅವರು ಬಿಜೆಪಿಯ ಹುರಿಯಾಳಾಗಿದ್ದು, ತೀವ್ರ ಪ್ರಬಲ ಪೈಪೋಟಿ ನೀಡಲು ತಂತ್ರಗಾರಿಕೆ ಆರಂಭಿಸಿದ್ದಾರೆ. ಬಿಜೆಪಿ ಈ ಹಿಂದಿನ ಚುನಾವಣೆಗಳಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಕೆಲಸ ಮಾಡುತ್ತ ಬಂದಿದೆ. ಹೀಗಾಗಿ ಈ ಬಾರಿಯ ಅಭ್ಯರ್ಥಿ ಆಯ್ಕೆಯು ಕಾಂಗ್ರೆಸ್ ಕಟ್ಟಿ ಹಾಕುವ ರಣತಂತ್ರದ ಭಾಗವಾಗಿಯೇ ವಿಶ್ಲೇಷಿಸಲಾಗುತ್ತಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img