ಹಳ್ಳೂರಿನಲ್ಲಿ ಜನ ಬೆಂಬಲದ ಅಲೆ – ಶ್ರೀ ಉಮೇಶ್ ಮೇಟಿ ಪರ ಭರ್ಜರಿ ಪ್ರಚಾರ
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ ಕ್ಷೇತ್ರ ವ್ಯಾಪ್ತಿಯ ಹಳ್ಳೂರ ಗ್ರಾಮದಲ್ಲಿ ಜರುಗಿದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಉಮೇಶ್ ಮೇಟಿ ಅವರ ಪರವಾಗಿ ಮತಯಾಚಿಸಲಾಯಿತು.
ಮತದಾರರೊಂದಿಗೆ ನೇರ ಸಂವಾದ ನಡೆಸಿದೆ. ದಿ|| ಹೆಚ್. ವೈ. ಮೇಟಿಯವರು ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆಗಳನ್ನು ತಿಳಿಸಿದೆ. ಸ್ಥಳೀಯರು ಉತ್ಸಾಹದಿಂದ ನಮ್ಮ ಮಾತುಗಳನ್ನು ಆಲಿಸಿ, ಕಾಂಗ್ರೆಸ್ ಪಕ್ಷದ ಮೇಲೆ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬೆಂಬಲ ನೀಡಿ, ಉಮೇಶ್ ಮೇಟಿ ಅವರನ್ನು ಗೆಲುವಿನತ್ತ ಕೊಂಡೊಯ್ಯಬೇಕೆಂದು ಮನವಿ ಮಾಡಿಕೊಂಡರು



