Monday, June 1, 2026
26.1 C
Belagavi

ಬಿಜೆಪಿಯವರ ಅಧಿಕಾರದಲ್ಲಿ ಶ್ರೀಮಂತರ ಬಡವರ ನಡುವಿನ ಅಂತರ ಹೆಚ್ಚಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಬಿಜೆಪಿಯವರ ಅಧಿಕಾರದಲ್ಲಿ ಶ್ರೀಮಂತರ ಬಡವರ ನಡುವಿನ ಅಂತರ ಹೆಚ್ಚಿದೆ

ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳಲ್ಲಿ 1.31 ಲಕ್ಷ ಕೋಟಿ ಗಳನ್ನು ಗ್ಯಾರಂಟಿಗಳಿಗೆ ನೀಡಿದೆ

ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಉಮೇಶ್ ಮೇಟಿಯವರನ್ನು ಗೆಲ್ಲಿಸಿ- ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

ಬಾಗಲಕೋಟೆ, ಏಪ್ರಿಲ್ 4 : ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಮಾತನಾಡಿದರು.

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.

ತಳಸಮುದಾಯವದರಿಗೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ

ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ವಿಬಿಜಿರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ

ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದರು.

ಬಾಗಲಕೋಟೆ ವೈದ್ಯಕೀಯ ಕಾಲೇಜು-ಹೆಚ್.ವೈ.ಮೇಟಿ ಕನಸು

ಹೆಚ್.ವೈ.ಮೇಟಿಯವರು 5 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ ಜನಾನುರಾಗಿ ನಾಯಕರಾಗಿದ್ದರು, ಜಾತಿಬೇಧವಿಲ್ಲದೇ ಜನರ ಸೇವೆ ಸಲ್ಲಿಸಿದವರು. ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕಂಡಿದ್ದರು. ಅದರಂತೆ ಇಲ್ಲಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದೆ. ಆದ್ದರಿಂದ ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮಿಸಿದ ಹೆಚ್.ವೈ.ಮೇಟಿಯವರ ಪುತ್ರ ಉಮೇಶ್ ಮೇಟಿಯವರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೋರಿದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಪಕ್ಷ ನಮ್ಮದು

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿ ಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ ಎಂದರು.

ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷ ವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು. ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ , ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದರು.

ಬಿಜೆಪಿ ನುಡಿದಂತೆ ನಡೆದಿಲ್ಲ

ನರೇಂದ್ರ ಮೋದಿಯವರು 2014 ರಲ್ಲಿ ಹೇಳಿದ್ದನ್ನು ಇಲ್ಲಿಯವರೆಗೂ ಜಾರಿ ಮಾಡಿಲ್ಲ. ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಬಡತನ ಹೋಗುತ್ತದೆ, ನಿರುದ್ಯೋಗ ಹೋಗಲಾಡಿಸಲಾಗುತ್ತದೆ, ರೈತರ ಆದಾಯ ದುಪ್ಪಟಾಗುತ್ತದೆ ಎಂದೆಲ್ಲಾ ಹೇಳಿದ್ದರು. ಒಳ್ಳೆ ದಿನಗಳು ಬರಲಿಲ್ಲ, ರೈತರ ಆದಾಯವೂ ಎರಡು ಪಟ್ಟು ಆಗಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿ ಮನೆಗೆ 15 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದರು, ಕೊಟ್ಟರೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ

ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದರು.

ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ , ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು
ಅಂತ್ಯೋದಯ, ಸರ್ವೋದಯ ಮಂತ್ರವನ್ನು ಮಹಾತ್ಮಾ ಗಾಂಧಿ ನೀಡಿದ್ದರು. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ , ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು ಎಂದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img