ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ನಾಗರಸನಹಳ್ಳಿಯಲ್ಲಿಂದು
ನಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀ ಶ್ರೀನಿವಾಸ್ ಟಿ. ದಾಸಕರಿಯಪ್ಪನವರ ಪರವಾಗಿ ಪ್ರಚಾರ ನಡೆಸಿದೆನು.
ಈ ಸಂದರ್ಭದಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರದ ಜನರನ್ನು ಆತ್ಮೀಯವಾಗಿ ಭೇಟಿಯಾಗಿ, ಅಭಿವೃದ್ಧಿಯ ಪರವಾಗಿ ಹಾಗೂ ಸುಶಾಸನದ ಪರವಾಗಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ವಿನಂತಿಸಿಕೊಂಡೆನು. ಜನರಿಂದ ಉತ್ತಮ ಸ್ಪಂದನೆ ದೊರಕಿದ್ದು, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ಮತ್ತಷ್ಟು ಬಲವಾಗಿದೆ.
ಈ ಪ್ರಚಾರದಲ್ಲಿ ಅಭ್ಯರ್ಥಿ ಶ್ರೀ ಶ್ರೀನಿವಾಸ್ ಟಿ. ದಾಸಕರಿಯಪ್ಪ, ಸ್ಥಳೀಯ ಮುಖಂಡರಾದ ಶ್ರೀ ವಿಜಯ್ ಕುಮಾರ್, ಶ್ರೀ ಲೋಕಿಕೇರಿ ನಾಗರಾಜ್, ಶ್ರೀ ಕೊಳೆನಹಳ್ಳಿ ಸತೀಶ್, ಶ್ರೀ ಧನಂಜಯ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



