Friday, July 17, 2026
23.9 C
Belagavi

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿ.ಎಂ ಸಿದ್ದರಾಮಯ್ಯ

advertisement

spot_img

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿ.ಎಂ ಸಿದ್ದರಾಮಯ್ಯ

ನಮ್ಮ ಅಭಿವೃದ್ಧಿ ಜನರಿಗೆ ಮುಟ್ಟಿದೆ: ಜನ ನಮ್ಮ ಪರವಾಗಿದ್ದಾರೆ: ಬಿಜೆಪಿಗೆ ಸಿಎಂ ಖಡಕ್ ಉತ್ತರ

ಪಿರಿಯಾಪಟ್ಟಣ :  ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ.
ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು.

ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಲಾಗಿದ್ದಕಾರ್ಯಕ್ರಮದಲ್ಲಿ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಸ್ಥಾನ ನಿರ್ಮಾಣ, ಒಕ್ಕಲಿಗ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ಹಾಗೂ ಬೆಟ್ಟದ ಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿದ್ದು ಈ ಬಾರಿಯ ಆಯವ್ಯಯದಲ್ಲಿ ಸುಮಾರು 82 ಸಾವಿರ ಕೋಟಿ ರೂಗಳನ್ನು ಅಭಿವೃದ್ಧಿ ಕೆಲಸಗಳಿಗೆ ಮೀಸಲಿರಿಸಿದೆ ಎಂದರು.

ವಿಶ್ವಮಾನವ ಕುವೆಂಪು ಆಶಯ ನಮ್ಮದು

ಕುವೆಂಪು ಅವರು ವಿಶ್ವಮಾನವರಾಗುವ ಪ್ರಯತ್ನವನ್ನು ಮಾಡಿದ್ದರು. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕು ಎಂದು ಬಯಸಿದ್ದರು. ಎಲ್ಲರೂ ಮನುಷ್ಯರಾಗಿ ಬಾಳಬೇಕೆನ್ನುವ ಆಶಯವನ್ನು ಹೊಂದಿದ್ದ ಕುವೆಂಪು ಅವರ ಭವನ ಇಲ್ಲಿ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹ ಎಂದರು.

50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ

ಬೆಟ್ಟದಪುರ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಯನ್ನು 50 ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ಸಚಿವರಾದ ವೆಂಕಟೇಶ್ ಅವರು ಪಿರಿಯಾಪಟ್ಟಣದ ಶಾಸಕರಾದ ನಂತರ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ನುಡಿದಂತೆ ನಡೆಯುವ ಸರ್ಕಾರ ನಮ್ಮದು

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಮುಂದೆಯೂ ಈ ಯೋಜನೆಗಳನ್ನು ಮುಂದುವರೆಸಲಾಗುವುದು. ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷ ಪ್ರಸ್ತುತ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಅಭಿವೃದ್ಧಿಗೂ ಹಣವನ್ನು ಮೀಸಲಿರಿಸಿದೆ ಎನ್ನಲು ಇಂದು ಶಂಕು ಸ್ಥಾಪನೆಯಾಗಿರುವ 419.78 ಕೋಟಿ ರೂ
ಗಳ ಅಭಿವೃದ್ಧಿ ಕಾಮಗಾರಿಗಳೇ ಸಾಕ್ಷಿ ಎಂದರು.

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿವೆ

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ. ಟೀಕೆಗಳು ವಾಸ್ತವದ ನೆಲೆಗಟ್ಟಿನಲ್ಲಿರಬೇಕು. ಸುಳ್ಳು ಹೇಳುವುದನ್ನೇ ಕಸಬು ಮಾಡಿಕೊಳ್ಳದೆ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾತನಾಡಬೇಕು. ಅವರು ಅಧಿಕಾರದಲ್ಲಿದ್ದಾಗ ನಾಲ್ಕು ವರ್ಷಗಳ ಕಾಲ ಏನು ಮಾಡಿದ್ದಾರೆಂದು ಜನರ ಮುಂದಿಡಬೇಕು. ನಾವು ಅಭಿವೃದ್ಧಿ ಕಾರ್ಯಗಳ ಮೂಲಕವೇ ಬಿಜೆಪಿಯ ಅಪಪ್ರಚಾರಕ್ಕೆ ಉತ್ತರ ಕೊಡುತ್ತಿದ್ದೇವೆ ಎಂದರು.

ಜನರು ನಮ್ಮ ಪರವಿದ್ದಾರೆ

ಜನ ನಮ್ಮ ಸರ್ಕಾರದ ಪರವಾಗಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದ್ದು, 2028ರ ಚುನಾವಣೆಯಲ್ಲಿಯೂ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ವೆಂಕಟೇಶ್, ಹೆಚ್. ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಶಾಸಕರಾದ ಹರೀಶ್ ಗೌಡ ರವಿಶಂಕರ್, ದರ್ಶನ್ ಧ್ರುವ ನಾರಾಯಣ್, ಮೊದಲಾದವರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img