ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿಯನ್ನು ಪರಿಶೀಲಿಸಲಾಯಿತು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ Narendra Modi ಅವರ ಮಾರ್ಗದರ್ಶನದಲ್ಲಿ ಹುಬ್ಬಳ್ಳಿಯ ಮೂಲಸೌಕರ್ಯ ಕ್ರಾಂತಿಯು ಅಭೂತಪೂರ್ವ ಪ್ರಗತಿಯನ್ನು ಸಾಧಿಸುತ್ತಿದೆ. ಹುಬ್ಬಳ್ಳಿಯು ಇಂದು ದೇಶದ ಇತರ ಪ್ರಮುಖ ನಗರಗಳೊಂದಿಗೆ ಅತ್ಯುತ್ತಮ ಸಂಪರ್ಕವನ್ನು ಹೊಂದಿದ್ದು, ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ.
ಈ ಹೊಸ ಟರ್ಮಿನಲ್ ಕಟ್ಟಡವು ಪೂರ್ಣಗೊಂಡ ನಂತರ ಪ್ರಯಾಣಿಕರಿಗೆ ಮತ್ತಷ್ಟು ಅತ್ಯಾಧುನಿಕ ಸೌಲಭ್ಯಗಳು ದೊರೆಯಲಿದ್ದು, ನಮ್ಮ ಭಾಗದ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ಸಿಗಲಿದೆ. ಈ ನೂತನ ಕಟ್ಟಡವು ಪ್ರಯಾಣಿಕರಿಗೆ ಸುಗಮ ಹಾಗೂ ವಿಶ್ವಮಟ್ಟದ ಅನುಭವವನ್ನು ನೀಡಲಿದೆ.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಯಿತು.
ಶಾಸಕರಾದ ಶ್ರೀ ಅರವಿಂದ ಬೆಲ್ಲದ Arvind Bellad , ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಕಮಿಷನರ್ ಶ್ರೀ ಶಶಿಕುಮಾರ್ , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ರುದ್ರೇಶ್ ಗಾಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



