Thursday, July 16, 2026
21.1 C
Belagavi

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಗೆಲ್ಲುವ ವಿಶ್ವಾಸ ಕಳೆದುಕೊಂಡಿದೆ

ಅಸ್ಸಾಂ ರಾಜ್ಯದ ಜನರ ಬಯಕೆಯಂತೆ ಬದಲಾವಣೆ ಬರಲಿದೆ

ಗುವಾಹಟಿ, ಮೇ 02:

“ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಅಸ್ಸಾಂ ರಾಜ್ಯದ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿದ್ದು, ಆತ್ಮವಿಶ್ವಾಸದಲ್ಲಿದೆ. ನಮ್ಮ ತಂಡದ ಪರಿಶ್ರಮದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆಯನ್ನು ಬಹಳ ಚೆನ್ನಾಗಿ ನಡೆಸಿದ್ದು, ಸಕಾರಾತ್ಮಕ ಫಲಿತಾಂಶದ ನಿರೀಕ್ಷೆ ಇದೆ. ಮಾಧ್ಯಮಗಳ ವರದಿ ಏನೇ ಇದ್ದರೂ ನನಗೆ ಪಕ್ಷ ಅಧಿಕಾರ ಬರುವ ವಿಶ್ವಾಸವಿದೆ. ಮಾಧ್ಯಮಗಳ ವರದಿ ನೋಡಿ ಅಸ್ಸಾಂ ಮತದಾರರಲ್ಲಿ ಆತಂಕ ಮೂಡಿದೆ. ಅಸ್ಸಾಂನಲ್ಲಿ ಬಿಜೆಪಿ ಜೊತೆ ಗುರುತಿಸಿಕೊಂಡವರಿಗೆ ಮಾತ್ರ ಉಚಿತ ಯೋಜನೆಗಳನ್ನು ನೀಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಯಾರು ಯಾರಿಗೆ ಮತ ಹಾಕಿದ್ದಾರೆ ಎಂದು ಹೇಗೆ ಹೇಳಲು ಸಾಧ್ಯ? ನಮ್ಮ ಆಂತರಿಕ ಸಮೀಕ್ಷೆ ಉತ್ತಮವಾಗಿದ್ದು, ಯಾರ ನೆರವು ಇಲ್ಲದೇ ನಾವು ಅಧಿಕಾರ ಹಿಡಿಯುವ ವಿಶ್ವಾಸ ನಮ್ಮ ಅಭ್ಯರ್ಥಿಗಳಲ್ಲಿ ಇದೆ” ಎಂದು ತಿಳಿಸಿದರು.

ಬಿಜೆಪಿ ಗೆಲ್ಲುವ ವಿಶ್ವಾಸ ಕಳೆದುಕೊಂಡಿದೆ

“ಇದೇ ವೇಳೆ ನಮಗೆ ಬಂದಿರುವ ಮಾಹಿತಿ ಪ್ರಕಾರ ನಮ್ಮ ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕಿಸಿದೆ. ಇದು ಬಿಜೆಪಿಯವರು ಆತಂಕಕ್ಕೆ ಒಳಗಾಗಿರುವುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಗೆಲ್ಲುವ ವಿಶ್ವಾಸ ಕಳೆದುಕೊಂಡಿದೆ. ಆದರೆ ನಾವೆಲ್ಲರೂ ಒಟ್ಟಾಗಿದ್ದೇವೆ. ಹೀಗಾಗಿ ನಾವು ಇಲ್ಲಿ ಸೇರಿ ಮತದಾನದ ದಿನವನ್ನು ನಾವು ಹೇಗೆ ಎದುರುಸಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ. ಬಿಜೆಪಿ ಆಡಳಿತ ಯಂತ್ರ ದುರ್ಬಳಕೆಗೆ ಮುಂದಾಗಲಿದ್ದು, ನಾವು ಯಾವ ರೀತಿ ಜಾಗರೂಕರಾಗಿರಬೇಕು ಎಂದು ಮಾರ್ಗದರ್ಶನ ನೀಡಿದ್ದೇವೆ” ಎಂದರು.

“ಇದಕ್ಕಾಗಿ ದೆಹಲಿ, ಅಸ್ಸಾಂ ಹಾಗೂ ಗುವಾಹಟಿಯಲ್ಲಿ ಪ್ರತ್ಯೇಕ ಕಾನೂನು ಘಟಕ ಸ್ಥಾಪಿಸಲಾಗಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳು ಮತದಾನದ ದಿನ ಇಲ್ಲಿಗೆ ಆಗಮಿಸುತ್ತಾರೆ. ನಾವು ನಮ್ಮ ಅಭ್ಯರ್ಥಿಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಬಿಜೆಪಿಗೆ ಗೆಲ್ಲುವ ವಿಶ್ವಾಸ ಇದ್ದಿದ್ದರೆ ನಮ್ಮ ಅಭ್ಯರ್ಥಿಗಳು, ಶಾಸಕರನ್ನು ಸಂಪರ್ಕ ಮಾಡುತ್ತಿರಲಿಲ್ಲ” ಎಂದರು.

ಚುನಾವಣೋತ್ತರ ಸಮೀಕ್ಷೆ ವರದಿಗಳ ಬಗ್ಗೆ ಕೇಳಿದಾಗ, “ಈ ಸಮೀಕ್ಷೆಗಳಲ್ಲಿ ಬಳಸುವ ಮಾದರಿ ಪ್ರಮಾಣ ಬಹಳ ಸಣ್ಣದಾಗಿರುತ್ತವೆ. ಹೀಗಾಗಿ ನಮ್ಮ ಲೆಕ್ಕಾಚಾರ ಬೇರೆ ಇದೆ. ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ. ನಾನು ಇಲ್ಲಿಗೆ ಬಂದಿರುವುದೇ ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಿ, ಶಕ್ತಿ ತುಂಬಲು” ಎಂದು ತಿಳಿಸಿದರು.

ಅಸ್ಸಾಂ ರಾಜ್ಯದ ಜನರ ಬಯಕೆಯಂತೆ ಬದಲಾವಣೆ ಬರಲಿದೆ

ಅಸ್ಸಾಂ ಚುನಾವಣೆ ಬಗ್ಗೆ ಕೇಳಿದಾಗ, “ನಮ್ಮ ಕಾರ್ಯಕರ್ತರು ಬಹಳ ವಿಭಿನ್ನ. ಹೀಗಾಗಿ ಅಸ್ಸಾಂನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಮಗೆ ನಂಬಿಕೆ ಇದೆ. ಅವರು ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಮತದಾರರ ಮೇಲೆ ವಿಶ್ವಾಸವಿದೆ. ಅವರಿಗೆ ಬದಲಾವಣೆ ಬೇಕಾಗಿದೆ. ಆ ಬದಲಾವಣೆ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ” ಎಂದು ತಿಳಿಸಿದರು.

ತಮಿಳುನಾಡು ಚುನಾವಣೆ ಬಗ್ಗೆ ಕೇಳಿದಾಗ, “ದೇಶದಾದ್ಯಂತ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದರು.

ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೋಟ ಅಧಿಕಾರಕ್ಕೆ ಬರುವುದೇ ಎಂದು ಕೇಳಿದಾಗ, “ಪ್ರತಿ ರಾಜ್ಯದಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img