Friday, July 17, 2026
21 C
Belagavi

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಂದ ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ

advertisement

spot_img

*ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಂದ ಮಹಾನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ*

*ಪೌರ ಕಾರ್ಮಿಕರ ತ್ಚರಿತ ನೇಮಕಾತಿ ಸೂಚನೆ*

ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ವಿಕಾಸಸೌಧದಲ್ಲಿ ರಾಜ್ಯದ 13 ನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. 2011ರ ಜನಗಣತಿ ಆಧಾರದ ಮೇಲೆ ಈಗ ಪೌರ ಕಾರ್ಮಿಕರ ನಿಯೋಜಿಸಲಾಗಿದೆ. ವಾಸ್ತವವಾಗಿ ಈಗಿರುವ ಅಂದಾಜು ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವರು ತಿಳಿಸಿದರು.

15ನೇ ಹಣಕಾಸು ಅನುದಾನದಲ್ಲಿ ಈ ವರೆಗೂ ಖರ್ಷಾಗದೆ ಉಳಿದಿರುವ ಅನುದಾನವನ್ನು ಖರ್ಚು ಮಾಡಿ, ನಗರದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು.

13 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 97 ಇಂದಿರಾ ಕ್ಯಾಂಟೀನ್ ಮಂಜೂರು ಆಗಿವೆ. ಅದರಲ್ಲಿ 93 ಚಾಲ್ತಿಯಲ್ಲಿ  ಇವೆ, ಮಂಗಳೂರಿನಲ್ಲಿ 2, ಬೀದರ್‌ನಲ್ಲಿ 2 ಬಾಕಿ ಇವೆ. ಬೇಗ ಆರಂಭಿಸಬೇಕು. ಆಹಾರದ ಗುಣ ಮಟ್ಟದ ಬಗ್ಗೆ ಆಗಾಗ್ಗೆ ಪರಿಶೀಲಿಸಬೇಕು ಎಂದರು.

ಅಮೃತ್ ಯೋಜನೆ-2ರಲ್ಲಿ 42  ಕೆರೆಗಳ ಪುನಶ್ಚೇನಕ್ಕೆ  231 ಕೋಟಿ ಅನುದಾನ ಇದೆ. ಬೇಗ ಟೆಂಡರ್ ಕರೆದು ಅನುಷ್ಠಾನ ಮಾಡಬೇಕು.

ಬಿ ಖಾತಾ ದಿಂದ ಎ ಖಾತಾ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಆಸ್ತಿ ತೆರಿಗೆ 463 ಕೋಟಿ ಬಾಕಿ ಇದೆ. ವಸೂಲಿ ಮಾಡಬೇಕು ಎಂದು ತಿಳಿಸಿದರು.

ನಗರ ಚಾಲೆಂಜ್ ಫಂಡ್  ನಿಧಿಯಲ್ಲಿ 4400 ಕೋಟಿ ರೂ. ಉಪಯೋಗಿಸಿಕೊಳ್ಳಲು ಅವಕಾಶ ಇದೆ. ರೂ. 3900  ಕೋಟಿಯಷ್ಟು ಪ್ರಸ್ತಾವನೆ ಬಂದಿದೆ. ಉಳಿಕೆ ಅನುದಾನಕ್ಕೆ ಯೋಜನಾ ವರದಿ ಸಲ್ಲಿಸಲು ತಿಳಿಸಿದರು.

ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ ಧಾರವಾಡದಲ್ಲಿ ವಿಶ್ವಬ್ಯಾಂಕ್ ಪ್ರಾಯೋಜಿತ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದು, ಎಲ್ ಅಂಡ್ ಟಿ ಕಂಪನಿ ಯೋಜನೆ ಅನುಷ್ಠಾನ ಮಾಡುತ್ತಿದೆ. ಮಹಾನಗರ ಪಾಲಿಕೆಗಳು ನಿಗಾವಹಿಸಬೇಕು, ಕಾಮಗಾರಿ ಬೇಗ ಮುಗಿಸಲು ಸಹಕಾರ ನೀಡಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ ಬಿ ಕಾವೇರಿ, ಕೆಯುಡಬ್ಲ್ಯೂಎಸ್‌ಎಸ್‌ಬಿ ವ್ಯವಸ್ಥಾಪಕ ನಿರ್ದೇಶಕ ಡಾ. ಮಹೇಶ್, ಹಿರಿಯ ಐ.ಎ.ಎಸ್. ಅಧಿಕಾರಿ ಸೆಲ್ವಮಣಿ, ಪೌರಾಡಳಿತ ನಿರ್ದೇಶಕ ಪಿ.ಎನ್.ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img