Friday, July 17, 2026
20.9 C
Belagavi

ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಆಗುವ ರೀತಿ ‘ಎಸ್.ಐ.ಆರ್’ ಪ್ರಕ್ರಿಯೆ ನಡೆಸುತ್ತಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

advertisement

spot_img

ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಆಗುವ ರೀತಿ ‘ಎಸ್.ಐ.ಆರ್’ ಪ್ರಕ್ರಿಯೆ ನಡೆಸುತ್ತಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್ 28:

ಮೈಸೂರಿನ ಜಿಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿದ್ದ ವಿಭಾಗೀಯ ಮಟ್ಟದ ಎಸ್.ಐ.ಆರ್ ಜಾಗೃತಿ ಸಮಾವೇಶದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು.

ಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಯಾವುದೇ ಪಕ್ಷಪಾತ ಇಲ್ಲದೆ ಕಾರ್ಯನಿರ್ವಹಿಸಬೇಕು, ಆಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದರು.ಈ ಹಿಂದೆ ಮತದಾರರ ಪರಿಷ್ಕರಣೆ ನಡೆದಾಗ ಚುನಾವಣಾ ಆಯೋಗವು ಹೊಸದಾಗಿ ಮತದಾರರನ್ನು ಸೇರಿಸುತ್ತಿದ್ದರೇ ಹೊರತು, ಪಟ್ಟಿಯಿಂದ ತೆಗೆದು ಹಾಕುತ್ತಿರಲಿಲ್ಲ ಹಾಗೂ ಮತದಾರರ ದಾಖಲೆಗಳನ್ನು ಕೇಳುತ್ತಿರಲಿಲ್ಲ. ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ತಮಿಳುನಾಡು ಮತ್ತು ಬಿಹಾರದಲ್ಲಿ ಬಿಜೆಪಿಗೆ ಹೆಚ್ಚು ಲಾಭವಾಗುವಂತೆ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ಎಸ್.ಐ.ಆರ್ ಪ್ರಕ್ರಿಯೆ ನಡೆಯುವಾಗ ಅರ್ಜಿಯಲ್ಲಿ ತಪ್ಪು ಮಾಹಿತಿ ಕೊಟ್ಟರೆ ಅವರ ಹೆಸರು ಅಂತಿಮ ಪಟ್ಟಿಯಲ್ಲಿ ಬರುವುದೇ ಇಲ್ಲ. ಹಾಗಾಗಿ ನಮ್ಮ ಬಿ.ಎಲ್.ಒ.ಗಳು ಪ್ರತಿ ಮತದಾರರು ಅರ್ಜಿ ಸಲ್ಲಿಸುವಾಗ ಸಹಾಯ ಮಾಡಬೇಕು, ಮಾಹಿತಿ ಸರಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಸ್ವಲ್ಪ ಎಚ್ಚರ ತಪ್ಪಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯದಲ್ಲಿ ಹಾನಿಯಾಗುವುದು ನಿಶ್ಚಿತ ಎಂದು ಹೇಳಿದರು.ಮತದಾರರಿಗೆ ಆಯೋಗ ಕೇಳಿರುವ 11 ದಾಖಲೆಗಳು ಸುಲಭವಾಗಿ ಸಿಗಲು ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು, ಗ್ರಾಮ ಪಂಚಾಯತ್ ಹಾಗೂ ನಗರ ಪಾಲಿಕೆ ಮಟ್ಟದಲ್ಲಿ ದಾಖಲೆಗಳು ಸಿಗಲಿವೆ. ಈ ದಾಖಲೆಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಸರಿಯಾದ ಮಾಹಿತಿ ಒದಗಿಸದಿದ್ದರೆ ಪೌರತ್ವವೇ ರದ್ದಾಗಬಹುದು, ಸರ್ಕಾರಿ ಸೌಲಭ್ಯಗಳು ಸಿಗದೇ ಹೋಗಬಹುದು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ನಮ್ಮ ಪಕ್ಷದ ಬಿ.ಎಲ್.ಒ.ಗಳು ಆ ದಾಖಲೆಗಳು ಹಾಗೂ ಸಮಗ್ರ ಪ್ರಕ್ರಿಯೆ ಕುರಿತು ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ತಿಳಿಸಿದರು.ಜನಜಾಗೃತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಚಂದ್ರಶೇಖರ್, ಉಪಾಧ್ಯಕ್ಷರಾದ ವಿ.ಆರ್. ಸುದರ್ಶನ್, ಜಿಲ್ಲಾಧ್ಯಕ್ಷರಾದ ಬಿ.ಜೆ. ವಿಜಯಕುಮಾರ್, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img