Friday, July 17, 2026
26.5 C
Belagavi

ತುಂಬಿದ ನವಿಲು ತೀರ್ಥ ಜಲಾಶಯ: ಪ್ರವಾಹದ ಆತಂಕದಲ್ಲಿ ರಾಮದುರ್ಗ ತಾಲೂಕು

advertisement

spot_img

ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಅತ್ಯಧಿಕ ಮಳೆಯಿಂದಾಗಿ ನವೀಲುತೀರ್ಥ ಜಲಾಯಶಕ್ಕೆ ಒಳಹರಿವು ಸುಮಾರು 10 ಸಾವಿರ ಕ್ಯೂಸೆಕ್ ದಾಟಿದ್ದು, ಜಲಾಶಯ ಸಂಗ್ರಹ ಸಾಮರ್ಥ್ಯ 2079 ಅಡಿಗಳ ಪೈಕಿ 2077 ಅಧಿಕ ಅಡಿ ತಲುಪಿದ್ದು, ಹೀಗಾಗಿ ಇಂದು ಮತ್ತೇ 10 ಸಾವಿರದಿಂದ 12 ಸಾವಿರ ಕ್ಯೂಸೆಕ್ಸ್ ಗೆ ಹೆಚ್ಚಿಸಿದ್ದು, ನದಿ ಪಾತ್ರದ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ತಾಲೂಕಿನಲ್ಲಿ ಹರಿದಿರುವ ಮಲಪ್ರಭೆ ಈಗ ತುಂಬಿ ಹರಿಯುತ್ತಿದ್ದು ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ಜನರೆಲ್ಲಾ ಬೇರೆ ಕಡೆಗೆ ಸಾಗುವದಾಗಿದೆ. ಇತ್ತಿಚೆಗೆ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಪ್ರವಾಹದಿಂದ ಜನರು ತತ್ತರಿಸುವ ಪರಿಸ್ಥಿತಿ ನೋಡಲಾಗಿತ್ತು. ಈಗ ಅದೇ ಸ್ಥಿತಿ ರಾಮದುರ್ಗ ತಾಲೂಕಿಗೆ ಬಂದೊದಗಿದೆ.

ಜಲಾಶಯದ ಗರಿಷ್ಟ ಮಟ್ಟ 2079.5೦ ಅಡಿ ಇದ್ದು ಈಗ ಸಂಪೂರ್ಣ ಭರ್ತಿಯಾಗಲು 2 ಅಡಿಯಷ್ಟು ಮಾತ್ರ ಬಾಕಿ ಇದ್ದು, ಮಂಗಳವಾರ ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಮಳೆ ಹೆಚ್ಚಾದರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರದ ಹಳೇ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರವನ್ನು ನಿಷೇದಿಸಲಾಗಿದೆ. ಅಲ್ಲದೇ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಅನೇಕ ಹೊಲಗಳಿಗೆ ನೀರು ನುಗ್ಗಿದ್ದು ಬೆಳೆಯಲ್ಲಾ ನೀರುಪಾಲಾಗಿವೆ.  ಮಳೆ ಹೆಚ್ಚಾಗಿ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ರಾಮದುರ್ಗ ಪಟ್ಟಣದ ಪಡಕೋಟಿ, ಕಿಲಬನೂರ, ನೇಕಾರ ಪೇಠೆ ಸೇರಿದಂತೆ ತಾಲೂಕಿನ ಸಾಕಷ್ಟು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಈಗಾಗಲೇ ನದಿಗೆ ಹರಿಬಿಟ್ಟ 12 ಸಾವಿರ ಕ್ಯೂಸೆಕ್ ನೀರಿನಿಂದ ನದಿಪಾತ್ರದ ಯಾವುದೆ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿಲ್ಲ. ರೈತರ ಜಮೀನುಗಳಿಗೆ ಮಾತ್ರ ನೀರು ನುಗ್ಗಿದ್ದು, ಒಳ ಹರಿವು ಪ್ರಮಾಣ ಹೆಚ್ಚಾದರಿಂದ ೧೦ ಸಾವಿರದಿಂದ ೧೨ ಸಾವಿರಕ್ಕೆ ಹೆಚ್ಚಿಸಲಾಗಿದೆ. ನೀರು ಹೆಚ್ಚಳಗೊಂಡರೆ ಯಾವ ಗ್ರಾಮಗಳಿಗೆ ಪ್ರವಾಹ ಉಂಟಾಗಲಿದೆ ಎಂಬುವದನ್ನು ನೋಡಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ತಾಲೂಕಾ ಆಡಳಿತದಿಂದ ಅಗತ್ಯ ಕ್ರಮವಹಿಸಲಾಗುವದು.

ಪ್ರಕಾಶ ಹೊಳೆಪ್ಪಗೋಳ, ತಹಶೀಲ್ದಾರರು ರಾಮದುರ್ಗ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img