Friday, December 12, 2025
19.4 C
Belagavi

ತುಂಬಿದ ನವಿಲು ತೀರ್ಥ ಜಲಾಶಯ: ಪ್ರವಾಹದ ಆತಂಕದಲ್ಲಿ ರಾಮದುರ್ಗ ತಾಲೂಕು

advertisement

spot_img

ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಅತ್ಯಧಿಕ ಮಳೆಯಿಂದಾಗಿ ನವೀಲುತೀರ್ಥ ಜಲಾಯಶಕ್ಕೆ ಒಳಹರಿವು ಸುಮಾರು 10 ಸಾವಿರ ಕ್ಯೂಸೆಕ್ ದಾಟಿದ್ದು, ಜಲಾಶಯ ಸಂಗ್ರಹ ಸಾಮರ್ಥ್ಯ 2079 ಅಡಿಗಳ ಪೈಕಿ 2077 ಅಧಿಕ ಅಡಿ ತಲುಪಿದ್ದು, ಹೀಗಾಗಿ ಇಂದು ಮತ್ತೇ 10 ಸಾವಿರದಿಂದ 12 ಸಾವಿರ ಕ್ಯೂಸೆಕ್ಸ್ ಗೆ ಹೆಚ್ಚಿಸಿದ್ದು, ನದಿ ಪಾತ್ರದ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ತಾಲೂಕಿನಲ್ಲಿ ಹರಿದಿರುವ ಮಲಪ್ರಭೆ ಈಗ ತುಂಬಿ ಹರಿಯುತ್ತಿದ್ದು ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ಜನರೆಲ್ಲಾ ಬೇರೆ ಕಡೆಗೆ ಸಾಗುವದಾಗಿದೆ. ಇತ್ತಿಚೆಗೆ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಪ್ರವಾಹದಿಂದ ಜನರು ತತ್ತರಿಸುವ ಪರಿಸ್ಥಿತಿ ನೋಡಲಾಗಿತ್ತು. ಈಗ ಅದೇ ಸ್ಥಿತಿ ರಾಮದುರ್ಗ ತಾಲೂಕಿಗೆ ಬಂದೊದಗಿದೆ.

ಜಲಾಶಯದ ಗರಿಷ್ಟ ಮಟ್ಟ 2079.5೦ ಅಡಿ ಇದ್ದು ಈಗ ಸಂಪೂರ್ಣ ಭರ್ತಿಯಾಗಲು 2 ಅಡಿಯಷ್ಟು ಮಾತ್ರ ಬಾಕಿ ಇದ್ದು, ಮಂಗಳವಾರ ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಮಳೆ ಹೆಚ್ಚಾದರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರದ ಹಳೇ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರವನ್ನು ನಿಷೇದಿಸಲಾಗಿದೆ. ಅಲ್ಲದೇ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಅನೇಕ ಹೊಲಗಳಿಗೆ ನೀರು ನುಗ್ಗಿದ್ದು ಬೆಳೆಯಲ್ಲಾ ನೀರುಪಾಲಾಗಿವೆ.  ಮಳೆ ಹೆಚ್ಚಾಗಿ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ರಾಮದುರ್ಗ ಪಟ್ಟಣದ ಪಡಕೋಟಿ, ಕಿಲಬನೂರ, ನೇಕಾರ ಪೇಠೆ ಸೇರಿದಂತೆ ತಾಲೂಕಿನ ಸಾಕಷ್ಟು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಈಗಾಗಲೇ ನದಿಗೆ ಹರಿಬಿಟ್ಟ 12 ಸಾವಿರ ಕ್ಯೂಸೆಕ್ ನೀರಿನಿಂದ ನದಿಪಾತ್ರದ ಯಾವುದೆ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿಲ್ಲ. ರೈತರ ಜಮೀನುಗಳಿಗೆ ಮಾತ್ರ ನೀರು ನುಗ್ಗಿದ್ದು, ಒಳ ಹರಿವು ಪ್ರಮಾಣ ಹೆಚ್ಚಾದರಿಂದ ೧೦ ಸಾವಿರದಿಂದ ೧೨ ಸಾವಿರಕ್ಕೆ ಹೆಚ್ಚಿಸಲಾಗಿದೆ. ನೀರು ಹೆಚ್ಚಳಗೊಂಡರೆ ಯಾವ ಗ್ರಾಮಗಳಿಗೆ ಪ್ರವಾಹ ಉಂಟಾಗಲಿದೆ ಎಂಬುವದನ್ನು ನೋಡಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ತಾಲೂಕಾ ಆಡಳಿತದಿಂದ ಅಗತ್ಯ ಕ್ರಮವಹಿಸಲಾಗುವದು.

ಪ್ರಕಾಶ ಹೊಳೆಪ್ಪಗೋಳ, ತಹಶೀಲ್ದಾರರು ರಾಮದುರ್ಗ.

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img