Monday, June 1, 2026
23.1 C
Belagavi

ಅತಿಥಿ ಉಪನ್ಯಾಸಕರ ನೈಜತೆ ವರದಿಗೆ ಕಾಲೇಜು ಶಿಕ್ಷಣ ಇಲಾಖೆಯೇ ಹಣವನ್ನು ಭರಿಸಬೇಕು-ಡಾ.ರಾಜು ಕಂಬಾರ

advertisement

spot_img

ರಾಮದುರ್ಗ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025 -26 ನೇ ಸಾಲಿನಲ್ಲಿ ಆಯ್ಕೆಗೊಂಡ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತಾಲಯವೇ ಹಣವನ್ನು ಭರಿಸಬೇಕೆಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಜು ಕಂಬಾರ ತಿಳಿಸಿದ್ದಾರೆ.

ರಾಮದುರ್ಗ ಪಟ್ಟಣದ ಶ್ರೀಮತಿ ಈರಮ್ಮ ಶಿ. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿಗೆ ಆಯುಕ್ತಾಲಯವೇ ಹಣವನ್ನು ಭರಿಸಬೇಕೆಂದು ಮಾನ್ಯ ಪ್ರಾಚಾರ್ಯ ಡಾ. ಎಂ ಡಿ ಕಮತಗಿ ಅವರ ಮೂಲಕ ಬೆಂಗಳೂರಿನ ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿ ಮಾತನಾಡಿದ ಕಂಬಾರರು, 2025- 26ನೇ ಶೈಕ್ಷಣಿಕ ವರ್ಷಕ್ಕೆ ಆಯ್ಕೆಯಾದ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿಯನ್ನು ತರಿಸಿಕೊಳ್ಳಲು ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಚಾರ್ಯರಿಗೆ ಆಯುಕ್ತರು ತಿಳಿಸಿದ್ದು, ಆಯುಕ್ತರ ಆದೇಶದಂತೆ ಎಲ್ಲಾ ಕಾಲೇಜುಗಳ ಪ್ರಾಚಾರ್ಯರು ಅತಿಥಿ ಉಪನ್ಯಾಸಕರ ಶೈಕ್ಷಣಿಕ ಪ್ರಮಾಣ ಪತ್ರಗಳ ನೈಜತೆ ವರದಿಯನ್ನು ನಮ್ಮಿಂದಲೇ ಹಣವನ್ನು ಭರಿಸಬೇಕೆಂದು ಹೇಳುತ್ತಿದ್ದಾರೆ.

ಕಳೆದ 2-3 ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ಉದ್ಯೋಗವಿಲ್ಲದೆ ಜೀವನವನ್ನು ನಿರ್ವಹಿಸುವುದೇ ಕಷ್ಟವಾಗಿದೆ.

ತಂದೆ -ತಾಯಿಗಳ ಪಾಲನೆಯೊಂದಿಗೆ, ಮಕ್ಕಳಿಗೆ ಶಿಕ್ಷಣ ಕಲಿಸುವುದು ತುಂಬಾ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಪ್ರಮಾಣ ಪತ್ರಗಳ ನೈಜತೆ ವರದಿಗೆ ವಿಶ್ವವಿದ್ಯಾಲಯಗಳಿಗೆ ಹಣವನ್ನು ಭರಿಸಲು ಸಾಧ್ಯವಾಗುವುದಿಲ್ಲ. ನಮ್ಮ ಪ್ರಮಾಣ ಪತ್ರಗಳ ನೈಜತೆ ವರದಿಗೆ ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆಯೇ ಶುಲ್ಕವನ್ನು ಭರಿಸಬೇಕೆಂದು ಒತ್ತಾಯಿಸಿದ ಅವರು, ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿ ವಿಳಂಬವಾಗಿದೆ ಎಂಬ ಕಾರಣವೊಡ್ಡಿ ನಮ್ಮ ಅಕ್ಟೋಬರ್ ತಿಂಗಳ ಗೌರವದನವನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬಾರದು. ಮೊದಲೇ ನಾವು ಆರ್ಥಿಕ ಸಂಕಷ್ಟದಲ್ಲಿ ಇದ್ದೇವೆ. ಒಂದು ವೇಳೆ ನಮ್ಮ ಗೌರವಧನ ತಡೆ ಹಿಡಿದರೆ, ರಾಜ್ಯಾದ್ಯಂತ ಎಲ್ಲಾ ಅತಿಥಿ ಉಪನ್ಯಾಸಕರು ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ತಮ್ಮ ಅವಗಾಹಣೆಗೆ ತರುತ್ತಾ, ನೈಜತೆ ವರದಿಗೆ ತಾವೇ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರ ಹಣವನ್ನು ಭರಿಸಬೇಕೆಂದು ಹೇಳಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img