Friday, July 17, 2026
21.1 C
Belagavi

ರಾಮದುರ್ಗ ದೇವಾಂಗ ಸಮಾಜದಿಂದ ಶ್ರೀ ದೇವಲ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮ

advertisement

spot_img

ದೇವಾಂಗ ಸಮಾಜದ ಮೂಲ ಪುರುಷ ಶ್ರೀದೇವಲ ಮಹರ್ಷಿ ಅವರ ಜಯಂತ್ಯೋತ್ಸವ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮವು ಪಟ್ಟಣದಲ್ಲಿ ಅದ್ದೂರಿಯಾಗಿ ಜರುಗಿತು.

ಉತ್ಸವದ ಪ್ರಯುಕ್ತ ದೇವಾಂಗ ಸಮಾಜದ ಬಾಂಧವರು ಬಾಣಕಾರ ಪೇಟೆ ಈಶ್ವರ ದೇವಸ್ಥಾನದಿಂದ ಮತ್ತು ರಾಧಾಪೂರ ಪೇಟೆಯ ಶ್ರೀಬನಶಂಕರಿ ದೇವಸ್ಥಾನದಿಂದ ಶ್ರೀದೇವಲ ಮಹರ್ಷಿಯವರ ಆಳೆತ್ತರದ ಪ್ರತಿಮೆಯನ್ನು ವಾಹನದಲ್ಲಿ ಪ್ರತಿಷ್ಠಾಪಿಸಿ, ನೇಕಾರ ಪೇಟೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕರಡಿ ಮಜಲು ವಾಧ್ಯಗಳೊಂದಿಗೆ ಸುಮಂಗಲೆಯರ ಆರತಿಯು ಮೆರವಣಿಗೆ ಕಳೆ ಹೆಚ್ಚಿಸಿತು.ತೊಟ್ಟಿಲೋತ್ಸವ: ಪಟ್ಟಣದ ನೇಕಾರ ಪೇಟೆಯ ರಾಧಾಪೂರ ಪೇಟೆಯ ಶ್ರೀದೇವಲ ಮಹರ್ಷಿ ದೇವಸ್ಥಾನದಲ್ಲಿ
ಬೆಳಿಗ್ಗೆ ವಿಶೇಷ ರುದ್ರಾಭಿಷೇಕ, ಅಲಂಕಾರ ಪೂಜೆ ನೆರವೇರಿಸಲಾಯಿತು. ಜಯಂತ್ಯೋತ್ಸವದ ಅಂಗವಾಗಿ ಶ್ರೀದೇವಲ ಮಹರ್ಷಿ ಉತ್ಸವ ಮೂರ್ತಿಯನ್ನು ತೊಟ್ಟಿಲಕ್ಕೆ ಹಾಕಿದ ಸುಮಂಗಲೆಯರು ಸಾಂಪ್ರದಾಯಿಕ ಪದಗಳನ್ನು ಹಾಡಿ ದೇವಾಂಗನೆಂದು ನಾಮಕರಣ ಮಾಡುವುದರ ಮೂಲಕ ತೊಟ್ಟಿಲೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಬನಶಂಕರಿ ದೇವಾಂಗ ಸಮಾಜದ ಅಧ್ಯಕ್ಷ ಕುಬೇರ ಗರಡಿಮನಿ, ಉಪಾಧ್ಯಕ್ಷ ರವಿ ಕರಡಿಗುಡ್ಡ, ನೇಕಾರ ಸಮುದಾಯದ ತಾಲೂಕು ಅಧ್ಯಕ್ಷ ನಾರಾಯಣ ಹೂಲಿ, ಹಿರಿಯರಾದ ಈರಪ್ಪಜ್ಜ ಕೊಣ್ಣೂರ, ಎಸ್.ಎಂ. ಮುರುಡಿ, ಏಕನಾಥ ಕೊಣ್ಣೂರ, ಪಿ.ಆರ್. ಸೂಳಿಭಾವಿ, ಐ.ಜಿ. ರಾಮದುರ್ಗ, ವಿಷ್ಣು ಸೂಳಿಭಾವಿ, ವಿನೋದ ಕರದಿನ, ಈರಣ್ಣ ನಂದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img