Tuesday, December 9, 2025
18.1 C
Belagavi

ರಾಮದುರ್ಗ ದೇವಾಂಗ ಸಮಾಜದಿಂದ ಶ್ರೀ ದೇವಲ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮ

advertisement

spot_img

ದೇವಾಂಗ ಸಮಾಜದ ಮೂಲ ಪುರುಷ ಶ್ರೀದೇವಲ ಮಹರ್ಷಿ ಅವರ ಜಯಂತ್ಯೋತ್ಸವ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮವು ಪಟ್ಟಣದಲ್ಲಿ ಅದ್ದೂರಿಯಾಗಿ ಜರುಗಿತು.

ಉತ್ಸವದ ಪ್ರಯುಕ್ತ ದೇವಾಂಗ ಸಮಾಜದ ಬಾಂಧವರು ಬಾಣಕಾರ ಪೇಟೆ ಈಶ್ವರ ದೇವಸ್ಥಾನದಿಂದ ಮತ್ತು ರಾಧಾಪೂರ ಪೇಟೆಯ ಶ್ರೀಬನಶಂಕರಿ ದೇವಸ್ಥಾನದಿಂದ ಶ್ರೀದೇವಲ ಮಹರ್ಷಿಯವರ ಆಳೆತ್ತರದ ಪ್ರತಿಮೆಯನ್ನು ವಾಹನದಲ್ಲಿ ಪ್ರತಿಷ್ಠಾಪಿಸಿ, ನೇಕಾರ ಪೇಟೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕರಡಿ ಮಜಲು ವಾಧ್ಯಗಳೊಂದಿಗೆ ಸುಮಂಗಲೆಯರ ಆರತಿಯು ಮೆರವಣಿಗೆ ಕಳೆ ಹೆಚ್ಚಿಸಿತು.ತೊಟ್ಟಿಲೋತ್ಸವ: ಪಟ್ಟಣದ ನೇಕಾರ ಪೇಟೆಯ ರಾಧಾಪೂರ ಪೇಟೆಯ ಶ್ರೀದೇವಲ ಮಹರ್ಷಿ ದೇವಸ್ಥಾನದಲ್ಲಿ
ಬೆಳಿಗ್ಗೆ ವಿಶೇಷ ರುದ್ರಾಭಿಷೇಕ, ಅಲಂಕಾರ ಪೂಜೆ ನೆರವೇರಿಸಲಾಯಿತು. ಜಯಂತ್ಯೋತ್ಸವದ ಅಂಗವಾಗಿ ಶ್ರೀದೇವಲ ಮಹರ್ಷಿ ಉತ್ಸವ ಮೂರ್ತಿಯನ್ನು ತೊಟ್ಟಿಲಕ್ಕೆ ಹಾಕಿದ ಸುಮಂಗಲೆಯರು ಸಾಂಪ್ರದಾಯಿಕ ಪದಗಳನ್ನು ಹಾಡಿ ದೇವಾಂಗನೆಂದು ನಾಮಕರಣ ಮಾಡುವುದರ ಮೂಲಕ ತೊಟ್ಟಿಲೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಬನಶಂಕರಿ ದೇವಾಂಗ ಸಮಾಜದ ಅಧ್ಯಕ್ಷ ಕುಬೇರ ಗರಡಿಮನಿ, ಉಪಾಧ್ಯಕ್ಷ ರವಿ ಕರಡಿಗುಡ್ಡ, ನೇಕಾರ ಸಮುದಾಯದ ತಾಲೂಕು ಅಧ್ಯಕ್ಷ ನಾರಾಯಣ ಹೂಲಿ, ಹಿರಿಯರಾದ ಈರಪ್ಪಜ್ಜ ಕೊಣ್ಣೂರ, ಎಸ್.ಎಂ. ಮುರುಡಿ, ಏಕನಾಥ ಕೊಣ್ಣೂರ, ಪಿ.ಆರ್. ಸೂಳಿಭಾವಿ, ಐ.ಜಿ. ರಾಮದುರ್ಗ, ವಿಷ್ಣು ಸೂಳಿಭಾವಿ, ವಿನೋದ ಕರದಿನ, ಈರಣ್ಣ ನಂದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img