Monday, June 1, 2026
26.1 C
Belagavi

ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಬಾಲಚಂದ್ರ ಜಾರಕಿಹೊಳಿಗೆ ಸನ್ಮಾನ ಸಮಾರಂಭ.

advertisement

spot_img

ರಾಮದುರ್ಗ: ಹೊರಗಿನವರು ಎಂದರೆ ನಾವೇನು ಪಾಕಿಸ್ತಾನದವರ ಮಾಜಿ ಶಾಸಕರಿಗೆ ಟಿಕೆಟ್ ಕೊಡಿಸಿದವರು ನಾನು ಮತ್ತು ದಿವಂಗತ ಉಮೇಶ್ ಕತ್ತಿ ಅವರು ಅವಾಗ ನಮ್ಮವರು ಎಂದವರು ಈಗ ಹೊರಗಿನವರು ಎಂದು ಅಪಪ್ರಚಾರ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮಾಜಿ ಶಾಸಕ ಮಹದೇವಪ್ಪ ಯಾದವಾಡ ಅವರಿಗೆ ಅರಭಾವಿ ಶಾಸಕ ಹಾಗೂ ಬೆಮಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪರೋಕ್ಷವಾಗಿ ಟಾಂಗ ನೀಡಿದರು.

ಪಟ್ಟಣದ ಹೊರವಲಯದಲ್ಲಿರುವ ಪ್ರಗತಿ ಸಭಾ ಭವನದಲ್ಲಿ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಹಿರೇರೆಡ್ಡಿ ಪೆನಲ್ ನಿರ್ದೇಶಕರು, ವಿವಿಧ ಸೊಸೈಟಿಯಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹೊರಿಗಿನವರು ಎಂದರೆ ನಾವು ಪಾಕಿಸ್ತಾನದವರಾ ಎಂದು ಪ್ರಶ್ನಿಸಿದ ಅವರು, ಸನ್ಮಾನ ಸಮಾರಂಭದಲ್ಲಿ ಸೇರಿದ ಜನತೆಯನ್ನು ನೋಡಿ, ಮಾಜಿ ಹಾಲಿಗಳಿಗೆ ನಿದ್ದೆ ಹತ್ತುವುದಿಲ್ಲ ಎಂದು ಲೇವಡಿ ಮಾಡಿದರು.ಡಿಸಿಸಿ ಬ್ಯಾಂಕ ಚುನಾವಣೆಯಲ್ಲಿ ಮಾಜಿ ಹಾಗೂ ಹಾಲಿ ಶಾಸಕರು ಏನೇ ಕಸರತ್ತು ನಡೆಸಿದರೂ 16 ಸೊಸೈಟಿಯವರು ನಮ್ಮ ಜೊತೆಗೆ ಗಟ್ಟಿಯಾಗಿ ನಿಂತು ನಮ್ಮನ್ನು ಬೆಂಬಲಿಸಿದ್ದು ಅವೆಲ್ಲ ಸಂಸೈಟಿಗಳ ಮೇಲೆ ವಿಶೇಷ ಕಾಳಜಿ ಪ್ರೀತಿ ಇದ್ದೆ ಇರುತ್ತದೆ. ಆಡಳಿತ ವ್ಯವಸ್ಥೆ ಇದ್ದರೂ, ಅದನ್ನು ಮೀರಿ ನಮಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಪ್ರೀತಿಗೆ ನಾವು ಚಿರಋಣಿಯಾಗಿರುತ್ತೇವೆ. ನಿಮ್ಮ ಕಷ್ಟ ಸುಖಗಳಲ್ಲಿ ನಾವು ಜೊತೆಯಾಗಿರುತ್ತೇವೆ.

ಸ್ಥಳೀಯ ಹಿರಿಯ ನಾಯಕರು ಮತ್ತು ನಮ್ಮ ಅಭಿಮಾನಿಗಳೊಂದಿಗೆ ನಾವು ಗಟ್ಟಿಯಾಗಿದ್ದೇವೆ ಸ್ಥಳೀಯ ನಾಯಕರುಗಳು ಎಲ್ಲರನ್ನೂ ಸ್ಪಂದಿಸುವ ಕೆಲಸ ಮಾಡಬೇಕು. ನಸೀಬು ಇದ್ದವರಿಗೆ 2028 ರಲ್ಲಿ ಚುನಾವಣೆಗೆ ಅವಕಾಶ ಸಿಗಲಿದೆ. ಇನ್ನು 8 ಹೊಸ ಸೊಸೈಟಿ ಜೊತೆಗೆ ತಮ್ಮ ಅಪೇಕ್ಷೆಯಂತೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದಲ್ಲಿ ಮತ್ತಷ್ಟು ಹೊಸ ಸೊಸೈಟಿಗಳನ್ನು ಮಂಜೂರು ಮಾಡಲು ನಾವು ಬದ್ದರಿದ್ದೇವೆ ಎಂದರು.

ಬಿಡಿಸಿಸಿ ಬ್ಯಾಂಕ ಅಧ್ಯಕ್ಷ
ಅಣ್ಣಸಾಬ್ ಜೊಲ್ಲೆ ಮಾತನಾಡಿ ರೈತರಿಗೆ ಕೇವಲ ರೂ.17 ಕೋಟಿ ಸಾಲ ಸೊಸೈಟಿಗಳಿದ್ದವು. ಈಗ 37 ಆಗಿವೆ. ಮೊದಲು ನೀಡಲಾಗಿತ್ತು. ಸದ್ಯ ರೂ.275 ಕೋಟಿ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರಾರಂಭವಾದ ಕೇವಲ ಮೂರು ತಿಂಗಳಲ್ಲಿ ರೂ.520 ಕೋಟಿ ಠೇವಣಿ ಹೆಚ್ಚಿಸಿದ್ದೇವೆ. ಫೆ-28 ರಂದು ವ್ಯವಹಾರಿಕ ಸಾಲ, ಗೃಹ ಸಾಲ, ಟ್ರ್ಯಾಕ್ಟರ್ ಸಾಲ ಮೂರು ಹೊಸ ಯೋಜನೆಗಳನ್ನು ಸೊಸೈಟಿಗಳ ನಿರ್ದೇಶಕರನ್ನು ಕರೆಯಿಸಿ, ಕಾರ್ಯಕ್ರಮ ಆಯೋಜನೆಯೊಂದಿಗೆ ಘೋಷಣೆ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ ಅಧ್ಯಕ ಅಣ್ಣಾಸಾಹೇಬ ಜೊಲ್ಲೆ ಅವರನ್ನು ತಾಲೂಕಿನ ಜನತೆ ಹಾಗೂ ಸೊಸೈಟಿಗಳ ಪರವಾಗಿ ಸತ್ಕರಿಸಲಾಯಿತು.

ನ್ಯಾಯವಾದಿಗಳಾದ ಪಿಎಂ ಜಗತಾಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಗತಾಪ

ಈ ಸಂದರ್ಭದಲ್ಲಿ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಬಿ.ಎಸ್.ಬೆಳವಣಕಿ, ನಿರ್ದೇಶಕರುಗಳಾದ ಬಸವರಾಜ್ ಹಿರೇರೆಡ್ಡಿ ಗೋಪಾಲ್ ರೆಡ್ಡಿ ಸಂಶಿ ಈರಣ್ಣ ಕಾಮನ್ನವರ, ಬಿ.ಎಸ್. ಸಿದರಡ್ಡಿ, ಪಾಟೀಲ್, ಪಿ.ಎಫ್. ಪಾಟೀಲ, ಗೋಪಾಲ ಪಾಟೀಲ, ಕಲ್ಲಣ್ಣ ವಜ್ರಮಟ್ಟಿ, ಮಹ್ಮದಶಫಿ ಬೆಣ್ಣೆ, ಪಡಿಯಪ್ಪ ಕ್ಯಾರಿ, ಭೀಮಶೆಪ್ಪ ಬಸಿಡೋಣ, ಬೀಡಕಿ ನಾಯಕ ಸೇರಿದಂತೆ ಇತರರಿದ್ದರು. ಡಾ.ಕೆ.ವಿ. ಪಾಟೀಲ ಸ್ವಾಗತಿಸಿದರು. ಬಿಡಿಸಿಸಿ ಬ್ಯಾಂಕ ಮಾಜಿ ನಿರ್ದೇಶಕ ಎಸ್.ಎಸ್. ಢವಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಾಧರ ಬೋಸ್ಲೆ ಕಾರ್ಯಕ್ರಮ ನಿರೂಪಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img