Saturday, April 11, 2026
28.1 C
Belagavi

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

advertisement

spot_img

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಭವಿಷ್ಯದ ಚಾಂಪಿಯನ್ ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.
ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್ ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್ ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯ ಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಹೇಳಿದರು.
ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಬೆ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img