Thursday, July 16, 2026
20.3 C
Belagavi

ಔಷಧ ಪೂರೈಕೆಗೆ ಸಾಕಷ್ಟು ಅನುದಾನ ನೀಡಲಾಗಿದೆ: ದಿನೇಶ್ ಗುಂಡೂರಾವ್

advertisement

spot_img

*ವಿಧಾನ ಪರಿಷತ್ತು*

*ಔಷಧ ಪೂರೈಕೆಗೆ ಸಾಕಷ್ಟು ಅನುದಾನ ನೀಡಲಾಗಿದೆ: ದಿನೇಶ್ ಗುಂಡೂರಾವ್*

ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್

KSMCL ಮುಖಾಂತರ ಕಳೆದ ಅಗಸ್ಟ್ ನಲ್ಲಿಯೇ ಪಟ್ಟಿಮಾಡಿ ಕ್ರಮ ವಹಿಸಿದ್ದೇವೆ. ಬಹಳಷ್ಟು ಔಷಧಗಳು ಸರಿಯಾದ ತಪಾಸಣೆ ಆಗದೆ ವಿತರಣೆ ಆಗುತ್ತಿತ್ತು. ಕಡಿಮೆ ಬಳಜೆಯ ಔಷಧಗಳ ಹೆಚ್ಚು ಖರೀದಿಯೂ ಆಗುತ್ತಿತ್ತು. ಈಗ ಅವಶ್ಯಕ ಔಷಧಗಳ ಹೆಚ್ಚು ಖರೀದಿ ಮಾಡುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳ ಮಾದರಿ ಅಧ್ಯಯನ ನಡೆಸಿದ್ದೇವೆ. ಉದಾ: ತಮಿಳುನಾಡು ರಾಜ್ಯ ಬಹಳ ಅಚ್ಚುಕಟ್ಟಾದ ಖರೀದಿ ಪ್ರಕ್ರಿಯೆ ನಡೆಸುತ್ತದೆ.ನಮ್ಮ ಟೆಂಡರ್ ಗಳಲ್ಲಿ ಅನವಶ್ಯಕ ಕಂಡೀಶನ್ ಗಳಿಂದ ಹೆಚ್ಚು ಬಿಡ್ ದಾರರು ಬರುತ್ತಿರಲಿಲ್ಲ. ಯಾವದು, ಎಷ್ಟು ಔಷಧ ಅಗತ್ಯ ಇದೆ ಎಂದು ಪರಿಶೀಲನೆ ಮಾಡಿ ಪಾರದರ್ಶಕ ವ್ಯವಸ್ಥೆ ಮುಖಾಂತರ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಖರೀದಿಸಿದ ಔಷಧಗಳನ್ನು ಉಗ್ರಾಣದಲ್ಲಿಯೂ ಮತ್ತೊಮ್ಮೆ ಪರೀಕ್ಷೆ ನಡೆಸಿ, ಗುಣಮಟ್ಟ ಖಾತರಿ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದ್ದೇವೆ. ಇದರಿಂದ ಸ್ವಲ್ಪ ವಿಳಂಬ ಆಗಿದೆ. Abrk ಅಡಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸುಮಾರು 300 ಕೋಟಿ ರೂ ಹಣ ಇದ್ದು, ಹೆಚ್ಚುವರಿಯಾಗಿ 30 ಕೋಟಿ ಅನುದಾನ ಬಿಡುಗಡೆ ಮಾಡಿ, ಸ್ಥಳೀಯವಾಗಿಯೂ ಖರೀದಿಸಲು ಸೂಚನೆ ನೀಡಲಾಗಿದೆ. KSMCL ಎಂಡಿ ಹುದ್ದೆಗೆ IAS ಅಧಿಕಾರಿಯನ್ನು ನೇಮಕ ಮಾಡಿ ಸರಿಯಾಗಿ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲಾಗಿದೆ. ಮೊದಲು ವರ್ಷಕ್ಕೊಮ್ಮೆ ಔಷದ ಸರಬರಾಜು ಆಗುತ್ತಿತ್ತು. ಬಹಳಷ್ಟು ಔಷಧಗಳು ವ್ಯರ್ಥವಾಗುತ್ತಿತ್ತು. ಈಗ ಹೊಸ ಕ್ರಮದಿಂದ ಪ್ರತಿ 3 ತಿಂಗಳಿಗೆ ಅಗತ್ಯ ಇರುವ ಔಷಧ ಸರಬರಾಜು ಮಾಡಲಾಗುತ್ತದೆ. ಇದರಿಂದ ಎಕ್ಸ್ಪೈರಿ ಆಗಿ ಹಾಳಾಗುವುದು ತಪ್ಪುತ್ತದೆ. ಜನರಿಗೆ ಉಚಿತವಾಗಿ ಔಷಧ ನೀಡುವುದು ಸರ್ಕಾರದ ಆದ್ಯ ಕರ್ತವ್ಯ, ಆ ನಿಟ್ಟಿನಲ್ಲಿ ಕ್ರಮಬದ್ಧ ರೀತಿಯಲ್ಲಿ ಆರೋಗ್ಯ ಇಲಾಖೆ ಕೆಲಸ ಮಾಡುತ್ತದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img