Monday, March 2, 2026
20.9 C
Belagavi

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

advertisement

spot_img

ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ!

ಕೋಲಾರದಲ್ಲಿ ದೇಶದ ಮೊಟ್ಟ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ : 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ನಿರ್ಮಾಣ

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ–ಏರ್ ಬಸ್ H125 ಲೈಟ್ ಹೆಲಿಕಾಪ್ಟರ್ ಅಂತಿಮ ಹಂತದ ಜೋಡಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ.ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಹಾಗೂ ಫ್ರಾನ್ಸ್ ಅಧ್ಯಕ್ಷರಾದ ಶ್ರೀ Emmanuel Macron ಅವರು ವರ್ಚುವಲ್ ಮೂಲಕ ಪಾಲ್ಗೊಂಡರು. ಮಾನ್ಯ ರಕ್ಷಣಾ ಸಚಿವರಾದ ಶ್ರೀ Rajnath Singh ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ.

ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ.

ಶ್ರೀ Ram Mohan Naidu Kinjarapu – ನಾಗರಿಕ ವಿಮಾನಯಾನ ಸಚಿವರು, ಶ್ರೀ ಎನ್. ಚಂದ್ರಶೇಖರನ್ -ಟಾಟಾ ಸನ್ಸ್ ಅಧ್ಯಕ್ಷರು, ಶ್ರೀ ಮಲ್ಲೇಶ್ ಬಾಬು- ಕೋಲಾರ ಸಂಸದರು, ಟಾಟಾ ಮತ್ತು ಏರ್ ಬಸ್ ಅಧಿಕಾರಿಗಳು ಹಾಗೂ ಉದ್ಯಮ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img