Wednesday, August 12, 2026
21.6 C
Belagavi

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕು

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಣಸೂರು : 
ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ ನಾನು ರಾಜಕಾರಣ ಮಾಡುತ್ತೇನೆ. ನನ್ನ ಇಡೀ ರಾಜಕೀಯ ಜೀವನದ 42 ವರ್ಷಗಳಿಂದಲೂ ಜನರು ಬೆಂಬಲಿಸುತ್ತಾ ಬಂದಿದ್ದಾರೆ ಎಂದರು.

2028 ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇಗೆಲ್ಲುತ್ತದೆ

ನಮ್ಮ ಸರ್ಕಾರ ಜನಪರವಾದ ಕೆಲಸ ಮಾಡಿದ್ದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕು

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕಾದರೆ ಬಸವಣ್ಣ, ಅಂಬೇಡ್ಕರ್, ಗಾಂಧೀಜಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶ

ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣವಾಗಬೇಕೆನ್ನುವುದು ನಮ್ಮ ಸರ್ಕಾರದ ಉದ್ದೇಶ. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮೌಢ್ಯಗಳಿಂದ ದೂರವಿದ್ದು, ಜಾತಿ, ವರ್ಗಗಳನ್ನು ಬಿಟ್ಟಾಗ ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಕಾಯಕ ಮತ್ತು ದಾಸೋಹ ಅರಿತು ಬಾಳಬೇಕು

ಕಾಯಕ ಮತ್ತು ದಾಸೋಹ ತತ್ವಗಳನ್ನು ನಮಗೆ ನೀಡಿರುವ ಬಸವಣ್ಣನವರ ಮಾತುಗಳನ್ನು ಅರಿತು ಪಾಲಿಸಬೇಕು ಎಂದರು.

ಬಸವಣ್ಣನವರು ಶ್ರೇಷ್ಠ ಮಾನವತಾವಾದಿ

ಬಸವಣ್ಣನವರು ಸಮಾಜದ ಜಾತಿವ್ಯವಸ್ಥೆ ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು. ಮೌಢ್ಯಗಳಿಂದ ದೂರವಿರುವ , ಜಾತಿ ಮತ್ತು ವರ್ಗರಹಿತ ಸಮಾಜ ನಿರ್ಮಾಣವನ್ನು ಅವರು ಬಯಸಿದ್ದರು. ಬಸವಣ್ಣನವರು ಮೇಲ್ಜಾತಿಗೆ ಸೇರಿದವರಾದರೂ, ಸಮಾಜದ ಕಟ್ಟಕಡೆಯ ಅಸ್ಪೃಶ್ಯತೆಯ ಜಾತಿಯಲ್ಲಿ ಹುಟ್ಟಿದವನು ಎಂದು ಹೇಳಿಕೊಳ್ಳುತ್ತಿದ್ದರು. ಬಸವಾದಿ ಶರಣರು ಸಮಾಜ ಪರಿವರ್ತನೆಗೆ ಪೂರ್ಣ ಪ್ರಮಾಣದಲ್ಲಿ ಸಫಲರಾಗಲಿಲ್ಲ. ಬಸವ ವಿಚಾರಗಳು ಹಿಂದೆಯೂ, ಇಂದಿಗೂ, ಭವಿಷ್ಯದಲ್ಲಿಯೂ ಪ್ರಸ್ತುತವಾಗಿದೆ. ಮನುಷ್ಯ ಸಮಾಜ ನಿರ್ಮಾಣ ಮಾಡಲು ಬಯಸಿದ ಬಸವಣ್ಣನವರು ಒಬ್ಬ ಮಾನವತಾವಾದಿ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಸವಣ್ಣನವರು ಪ್ರತಿಪಾದಿಸುತ್ತಿದ್ದರುಮತ್ತು ಇವುಗಳನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತವೆ ಎಂದು ವಿವರಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img