Sunday, October 12, 2025
20.8 C
Belagavi

ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ C. M. ಸಿದ್ದರಾಮಯ್ಯ.

advertisement

spot_img

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ.
ಸಭೆಯ ಮುಖ್ಯಾಂಶಗಳು ಹೀಗಿವೆ:

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img