Monday, August 10, 2026
20.5 C
Belagavi

ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು: ಪ್ರಿಯಾಂಕ್ ಖರ್ಗೆ

advertisement

spot_img

ಐಟಿ ಬಿಟಿ ಇಲಾಖೆಯಿಂದ 20 ಕೋಟಿ ರೂಗಳಲ್ಲಿ ಎಲೆಕ್ಟ್ರಾನಿಕ್ಸ್‌ ಸಿಟಿಯಲ್ಲಿ
ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು: ಪ್ರಿಯಾಂಕ್ ಖರ್ಗೆ

ಉತ್ಕೃಷ್ಟತಾ ಕೇಂದ್ರ ಹಾಗೂ
ಟೆಕ್ನಾಲಜಿ ಮ್ಯೂಸಿಯಂ ಶೇ 51 ಷೇರುಗಳ ವರ್ಗಾವಣೆಗೆ
ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ…

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ಸ್ ಸಿಟಿ (ಹಂತ-1) ಯಲ್ಲಿರುವ ಜೈವಿಕ, ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆ (IBAB) ಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಒಟ್ಟು 20ಕೋಟಿ ರೂ.ಗಳ ವೆಚ್ಚದಲ್ಲಿ ಜೈವಿಕ ತಂತ್ರಜ್ಞಾನಕ್ಕಾಗಿ ಕೃತಕ ಬುದ್ಧಿಮತ್ತೆಯ ಉತ್ಕೃಷ್ಮತಾ ಕೇಂದ್ರ (AI-CoE)ವನ್ನು ಜೈವಿಕ ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆ (IBAB) ಮತ್ತು ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯುಲರ್ ಪ್ಲಾಟ್‌ಫಾರ್ಮ್ಸ್ (C-CAMP) ಗಳನ್ನು ಪಾಲುದಾರರಾಗಿ ನೇಮಿಸಿ ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವು ದೇಶದಲ್ಲಿ ತಾಂತ್ರಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಮತ್ತು ಆರಂಭಿಕ ಹಂತದಲ್ಲಿ ಕೃತಕ ಬುದ್ಧಿಮತ್ತೆಯ (AI) ಪರಿವರ್ತಕ ಸಾಮರ್ಥ್ಯವನ್ನು ಗುರುತಿಸುವ ಮೂಲಕ, ಕರ್ನಾಟಕ ಸರ್ಕಾರವು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮೂಲಕ, ಕೃತಕ ಬುದ್ಧಿಮತ್ತೆಯಲ್ಲಿ ಶ್ರೇಷ್ಠತೆಯ ಕೇಂದ್ರ (CoE-AI) ಸ್ಥಾಪನೆಗೆ ಅನುಮೋದನೆ ನೀಡಿದೆ, ಈ ಮೂಲಕ ರಾಜ್ಯದಲ್ಲಿ AI ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.ಟೆಕ್ನಾಲಜಿ ಮ್ಯೂಸಿಯಂ ಶೇ 51 ಷೇರುಗಳ ವರ್ಗಾವಣೆಗೆ
ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಟೆಕ್ನಾಲಜಿ ಮತ್ತು ಇನ್ನೋವೇಷನ್ ಮೂಸಿಯಂ ಫೌಂಡೇಷನ್ (KTIMF)ನ 51% ಷೇರುಗಳನ್ನು ಮೆ.ಅನ್‌ಬಾಕ್ಸಿಂಗ್ ಬಿ.ಎಲ್.ಆರ್ ಫೌಂಡೇಷನ್‌ಗೆ ವರ್ಗಾಯಿಸಲು ಇಂದು ನಡೆದ ಸಚಿವ ಸಂಪುಟ ಸಬೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ನಾವೀನ್ಯತೆ ಮತ್ತು ನವೋದ್ಯಮ ಪರಿಸರ ವ್ಯವಸ್ಥೆಯ ಉದ್ದೇಶಗಳಿಗೆ ಅನುಗುಣವಾಗಿ ನಾವೀನ್ಯತೆ, ತಂತ್ರಜ್ಞಾನ ಅರಿವು, ನವೋದ್ಯಮ ಸಂಸ್ಕೃತಿ ಮತ್ತು ವಿಜ್ಞಾನ ಮತ್ತುತಂತ್ರಜ್ಞಾನದಲ್ಲಿ ಸಾರ್ವಜನಿಕರ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಕರ್ನಾಟಕ ಟೆಕ್ನಾಲಜಿ ಮತ್ತು ಇನ್ನೋವೇಷನ್ ಮ್ಯೂಸಿಯಂ ಫೌಂಡೇಷನ್ (KTIMF) ಅನ್ನು ಲಾಭರಹಿತ ಸಂಸ್ಥೆಯಾಗಿ ಸರ್ಕಾರ ಸ್ಥಾಪಿಸಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ NGEF ಆವರಣದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ 100 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದರಲ್ಲಿ, 49 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮತ್ತು 51 ಕೋಟಿ ರೂ.ಗಳನ್ನು ಖಾಸಗಿ ಪಾಲುದಾರರು ಭರಿಸುತ್ತಾರೆ ಎಂದು ಸಚಿವರು ಹೇಳಿದ್ದಾರೆ.ಮೆ.ಅನ್‌ಬಾಕ್ಸಿಂಗ್ ಬಿಎಲ್‌ಆರ್ ಫೌಂಡೇಷನ್ ಉದಯೋನ್ಮುಖ ಮತ್ತು ಉನ್ನತ ಬೆಳವಣಿಗೆಯ ವಲಯಗಳಾದ್ಯಂತ ನವೋದ್ಯಮಗಳನ್ನು ಪೋಷಿಸುವತ್ತ ಗಮನಹರಿಸುತ್ತದೆ, ನಾವೀನ್ಯತೆ-ನೇತೃತ್ವದ ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಪ್ರಮುಖ ಜಾಗತಿಕ ನವೋದ್ಯಮ ತಾಣವಾಗಿ ಕರ್ನಾಟಕದ ಸ್ಥಾನವನ್ನು ಬಲಪಡಿಸುತ್ತದೆ. ಈ ಉಪಕ್ರಮವು ನೀತಿ ಬೆಂಬಲ, ಪೈಲಟ್ ಅವಕಾಶಗಳು ಮತ್ತು ಐಟಿ, ನಾವೀನ್ಯತೆ ಮತ್ತು ನವೋದ್ಯಮ ನೀತಿಗಳ ಅಡಿಯಲ್ಲಿ ರಾಜ್ಯದ ಉದ್ದೇಶಗಳಿಗೆ ಅನುಗುಣವಾಗಿ ಉದ್ಯಮದ ತೊಡಗಿಸಿಕೊಳ್ಳುವಿಕೆಗೆ ಒಂದು ಒಮ್ಮುಖ ವೇದಿಕೆಯಾಗಿಯೂ ಸಹ ಕಾರ್ಯನಿರ್ವಹಿಸುತ್ತದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img