Monday, June 1, 2026
26.1 C
Belagavi

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ

advertisement

spot_img

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ

ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ, ಫೆಬ್ರವರಿ 13: 2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ , ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಮನಗಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು, ಕನ್ನಡ ನಾಡು ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ದೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದರು.

ಕನ್ನಡ ನಾಡು ನುಡಿಗೆ ಸರ್ಕಾರದ ಪ್ರೋತ್ಸಾಹ
ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ. ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್ , ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಅಸಮಾನತೆ ನಿವಾರಣೆಯಿಂದ ಸಮಸಮಾಜ ನಿರ್ಮಿಸಲು ಸಾಧ್ಯ
ಸಮಾಜದಲ್ಲಿ ಬಡವ ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನ ರಚಿಸದಿದ್ದರೆ, ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ತಂದವುಗಳಾಗಿವೆ. ಸಮಸಮಾಜ ನಿರ್ಮಿಸಿದಾಗ ಮಾತ್ರ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ
ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದಲೂ ಗ್ಯಾರಂಟಿ ಯೋಜನೆಗಳನ್ನು ನೀಡಿ, ಅಸಮಾನತೆಯನ್ನು ನಿವಾರಿಸುವ ಉದ್ದೇಶ ಹೊಂದಿದೆ. ಜನರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ಸಾಧ್ಯವಾಗಿಸದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಬಹುದು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ. ಜಾತಿವ್ಯವಸ್ಥೆ ಇಲ್ಲವಾಗಲು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ವಾತಂತ್ರ್ಯ ಬರಬೇಕು ಎಂದರು.

ನಾಡು ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಬದ್ಧ
ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ , ಮೈಸೂರು ದಸರಾ, ಕರಾವಳಿ ಉತ್ಸವ ಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img