Monday, August 10, 2026
21.2 C
Belagavi

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ: ಸಿಎಂ

advertisement

spot_img

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ: ಸಿಎಂ

ಶ್ರೀಘ್ರವಾಗಿ ಪದೋನ್ನತಿ ಆಗಲಿದೆ: ಸಿಎಂ ಭರವಸೆ

ಮಧ್ಯವರ್ತಿಗಳನ್ನು ದೂರವಿಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು :
ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟನೆ ಮಾಡಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ವಿಳಂಬ ಧೋರಣೆ ಕೂಡದು
ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು. ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ ಎಂದರು.

ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ
ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘಕ್ಕೆ ನೂರು ವರ್ಷಗಳ ಇತಿಹಾಸವಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ , ಮೂಲಭೂತ ಸೌಕರ್ಯಗಳು,ಕೈಗಾರಿಕೆಗಳ ಬೆಳವಣಿಗೆಗೆ ಕಾರಣೀಭೂತಗಿದ್ದಾರೆ. ಅವರ ಕಾಲದಲ್ಲಿ ದಿವಾನರಾಗಿದ್ದವರು ಸಂಘದ ಅಧ್ಯಕ್ಷರಾಗಿದ್ದರು ಎನ್ನುವುದು ಈ ಸಂಘದ ಹೆಗ್ಗಳಿಕೆ ಎಂದರು. ಅವರೆಲ್ಲರೂ ದಕ್ಷ ಆಡಳಿತಕ್ಕೆ ನಮಗೆ ದಾರಿದೀಪವಾಗಿದ್ದಾರೆ ಎಂದರು.

ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗ ಒಟ್ಟಾಗಿ ಕೆಲಸ ಮಾಡಬೇಕು. ಈ ಎರಡೂ ಜನರ ಪ್ರತಿನಿಧಿಗಳಾಗಿ ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ, ಸಮಾಜದ ಬಗ್ಗೆ ಅರಿವು ಇರಬೇಕು.
ನಿವೃತ್ತರಾಗುವವರೆಗೆ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶವಿದೆ. ಅಸಮಾನತೆ ಇರುವ ಸಮಾಜದಲ್ಲಿ ದುರ್ಬಲ ವರ್ಗಕ್ಕೆ ಸ್ಪಂದಿಸಬೇಕು. ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ, ಸಮಾಜದ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಜನರಿಗೆ ಸ್ಪಂದಿಸಲು ಸಾಧ್ಯ ಎಂದರು.

ಜನರ ಸಮಸ್ಯೆಗಳನ್ನು ಬಗೆಹರಿಸಿ
ನಮ್ಮ ಕೆಲಸವನ್ನು ನಾವು ಪ್ರೀತಿಸಬೇಕು. ಗ್ರಾಮೀಣ ಜನರನ್ನು ಪ್ರೀತಿಯಿಂದ ಮಾತನಾಡಿಸಿ ಅವರ ಸಮಸ್ಯೆ ಅರ್ಥೈಸಿಕೊಂಡು ಬಗೆಹರಿಸಿದರೆ ಅವರು ನಿಮ್ಮನ್ನು ಮರೆಯುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ ಎಂದರು.

ಜನಸೇವೆಗೆ ದೊರಕಿರುವ ಅವಕಾಶವನ್ನು ಸದುಪಯೋಗಿಸಿಕೊಳ್ಳಿ
ಸರ್ಕಾರ ರೂಪಿಸುವ ನೀತಿಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳ ಪಾತ್ರ ಹಿರಿದು. ಜನಸೇವೆಗೆ ದೊರಕಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ತೃಪ್ತಿದಾಯಕವಾಗಿ ಕೆಲಸ ಮಾಡಿರುವುದಕ್ಕಿಂತ ದೊಡ್ಡ ಪ್ರಮಾಣಪತ್ರ ಇನ್ನೊಂದಿಲ್ಲ ಎಂದರು. ಈ ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಜೀವನ ಸಾರ್ಥಕವಾಗಿ ಸೇವೆ ತೃಪಿಕರವಾಗಿ ಮಾಡಿದ್ದೇನೆ ಎಂಬ ಭಾವನೆ ನಿಮ್ಮಲ್ಲಿ ಇರಬೇಕು ಎಂದರು.

ಶ್ರೀಘ್ರವಾಗಿ ಪದೋನ್ನತಿ ಆಗಲಿದೆ: ಸಿಎಂ ಭರವಸೆ
ಪದೋನ್ನತಿ ಬಗ್ಗೆ ಕಂದಾಯ ಸಚಿವರು ಕಾರ್ಯೋನ್ಮುಖರಾಗಿದ್ದು, ಶ್ರೀಘ್ರವಾಗಿ ಪದೋನ್ನತಿ ಆಗಲಿದೆ. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.

ಕೆಎಎಸ್ ಅಧಿಕಾರಿಗಳ ಸಂಘದಲ್ಲಿ ಹೆಚ್ಚುವರಿಯಾಗಿ ಹನ್ನೊಂದು ಕೊಠಡಿಗಳನ್ನು ನಿರ್ಮಿಸಿದ್ದು, ಹೊರಭಾಗಗಳಿಂದ ಆಗಮಿಸುವ ಅಧಿಕಾರಿಗಳಿಗೆ ಉಪಯೋಗವಾಗಲಿದೆ.
ಕಂದಾಯ ಸಚಿವ ಕೃಷ್ಣಭೈರೇಗೌಡ, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಉಪಾಧ್ಯಕ್ಷ ಚನ್ನಬಸಪ್ಪ, ಕಾರ್ಯದರ್ಶಿ ಶಿವಕುಮಾರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img