Monday, June 1, 2026
23.7 C
Belagavi

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

*ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ*

*ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಮೈಸೂರು, ಮಾರ್ಚ್ 13: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img