Thursday, August 13, 2026
25.1 C
Belagavi

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

*ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ*

*ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಮೈಸೂರು, ಮಾರ್ಚ್ 13: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img