Monday, August 10, 2026
21.2 C
Belagavi

ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ.ಮುಖ್ಯಮಂತ್ರಿ Siddaramaiah

advertisement

spot_img

ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀಡೆಯಿಂದ ಓಡಾಡುವಂತಾದಾಗ ಮಾತ್ರ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಿಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು.ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು. ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್ ಇನ್ಸ್ ಪೆಕ್ಟರ್ ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4,911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ.ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ. ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ನಂಬಿದ್ದೇನೆ.

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಆ ದಿಕ್ಕಿನಲ್ಲಿ ಆರಕ್ಷಕರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ತಯಾರಕರು, ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ಪರಿಣಾಮ ಮಾರಕವಾಗುತ್ತದೆ. ಇದನ್ನು ನಿರ್ಮೂಲನೆ ಮಾಡದೆ ಹೋದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ.

ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು.
ಸೈಬರ್ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು.

ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಶ್ರೀಮಂತರು ಹಣಬಲದಿಂದ ದುರುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅಂಥ ಆಮಿಷಗಳಿಗೆ ಒಳಗಾಗಬಾರದು, ಧೈರ್ಯದಿಂದ ಕೆಲಸ ಮಾಡಿ ಪೋಲಿಸ್ ವೃತ್ತಿಯಲ್ಲಿ ಯಶಸ್ವಿಯಾಗಬೇಕು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img