Friday, July 17, 2026
23.9 C
Belagavi

ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆ

advertisement

spot_img

ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆ

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಿ
-ಜಿಪಂ ಸಿಇಒ ಭುವನೇಶ ಪಾಟೀಲ

ಧಾರವಾಡ  ಜು.2: ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರಿಶೀಲನೆ ಮಾಡಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು.

ಅವರು ಇಂದು (ಜುಲೈ 2) ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜನರು ಕುಡಿಯುವ ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಸಾರ್ವಜನಿಕರು ಬೋರವೆಲ್ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದರೆ, ಸೂಚನಾ ಫಲಕವನ್ನು ಅಳವಡಿಸಬೇಕಾಗುತ್ತದೆ. ಕಲುಷಿತ ನೀರು ಪೂರೈಕೆ ಮಾಡುತ್ತಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲೆ, ಅಂಗನವಾಡಿ ಹಾಗೂ ಮನೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಈಗಾಗಲೇ ದುರಸ್ತಿ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ವಾರದೊಳಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಬೇಕು. ದುರಸ್ತಿ ಕಾರ್ಯ ಕೈಗೊಳ್ಳದ ಗುತ್ತಿಗೆದಾರರನ್ನು ತೆಗೆದು ಹಾಕಲಾಗುವುದು. ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಾಮರ್ಶೆ ಮಾಡಬೇಕು. ಮೇಲ್ಮಟ್ಟದ ಕುಡಿಯುವ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಬೇಕು ಎಂದು ಅವರು ತಿಳಿಸಿದರು.

ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರರಾದ ಜಗದೀಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪರಶುರಾಮ ಎಫ್.ಕೆ., ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಕಮಲಾ ಬೈಲೂರು ಸೇರಿದಂತೆ ಎಲ್ಲ ತಾಲೂಕು ಪಂಚಾಯತಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img