Thursday, August 13, 2026
25.1 C
Belagavi

ಪ್ರಾಥಮಿಕ ಹಾಗೂ ಪ್ರೌಢ ಕಾಲೇಜು ಉಪನ್ಯಾಸಕರಿಗೆ ಪ್ರಬಂಧ ಸ್ಪರ್ಧೆ.

advertisement

spot_img

ರಾಮದುರ್ಗ: ಅಕ್ಟೋಬರ-2 ರಂದು ನಡೆಯಲಿರುವ ಗಾಂಧಿ ಜಯಂತಿ ಅಂಗವಾಗಿ ಜಗತ್ತು ಎದುರಿಸುತ್ತಿರುವ ಸಮಸ್ಯೆಗಳಿಗೆ ಗಾಂಧಿ ಚಿಂತನೆಗಳ ಪ್ರಸ್ತುತತೆ ವಿಷಯ ಕುರಿತು ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಉಪನ್ಯಾಸಕರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾದ ಶಾಖಾ ವ್ಯವಸ್ಥಾಪಕ ಹನಮಂತ್ರಾಯ ಬಿರಾದಾರ ಹೇಳಿದರು.ಪಟ್ಟಣದ ಪ್ರೆಸ್ ಕ್ಲಬ್‌ನಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಬಂಧ ಸ್ಪರ್ಧೆಯನ್ನು ಬ್ಯಾಂಕ್ ಆಪ್ ಬರೋಡಾ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದೆ. ಸ್ಪಧೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ಮುಖ್ಯಸ್ಥ ಎನ್.ಎಂ. ಬಿರಾದಾರ ಅವರು ವಿವಿಧ ಪುಸ್ತಕಗಳನ್ನು ಕೊಡಮಾಡಲಿದ್ದಾರೆ ಎಂದು ಹೇಳಿದರು.

ಗಾಂಧಿಜೀಯವರ ಚಿಂತನೆಗಳನ್ನು ಶಿಕ್ಷಕರು ಮೆಲುಕು ಹಾಕಿ ಅವುಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಉದ್ದೇಶದಿಂದ ಶಿಕ್ಷಕ, ಉಪನ್ಯಾಸಕರಿಗೆ

ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ತಾಲೂಕಿನ ಸಮಸ್ತ ಸರಕಾರಿ, ಖಾಸಗಿ, ಅನುದಾನಿತ ಶಾಲಾ ಶಿಕ್ಷಕ, ಉಪನ್ಯಾಸಕ ಬಳಗ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಪ್ರಬಂಧವನ್ನು ತಾವೆ ಕೈ ಬರಹದ ಮುಖಾಂತರ ಬರೆದುಕೊಂಡು, ಸೆ. 29 ರೊಳಗಾಗಿ ಪಟ್ಟಣದ ಪಿಎಂಶ್ರೀ ಶಾಲೆ ನಂ.4ರ ಶಿಕ್ಷಕ ಎನ್ .ಎ. ಶೇಖ ಅವರ ಹತ್ತಿರ ತಲುಪಿಸಬೇಕು. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ರೂ.12 ಸಾವಿರ, ದ್ವೀತಿಯ.9 ಸಾವಿರ, ತೃತೀಯ 6 ಸಾವಿರ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9449210795 ಸಂಖ್ಯೆಗೆ ಸಂಪರ್ಕಿಸಬೇಕು.ವಿಜೇತರಿಗೆ ಅಕ್ಟೋಬರ-2 ರಂದು ಪಟ್ಟಣದ ಗುರು ಭವನದಲ್ಲಿ ಸಂಜೆ 4 ಘಂಟೆಗೆ ನಡೆಯುವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವು ಮುತ್ಸದ್ದಿಗಳು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹನಮಂತ್ರಾಯ ಬಿರಾದಾರ ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಇಓ ಬಸವರಾಜ ಐನಾಪೂರ, ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕ ವುಡಮುಡಿ ಶಿವಕುಮಾರ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಐ. ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಏಣಿ, ಶಿಕ್ಷಕ ಎನ್.ಎ, ಶೇಖ ಸೇರಿದಂತೆ ಇತರರಿದ್ದರು

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img