Sunday, March 1, 2026
31.9 C
Belagavi

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

advertisement

spot_img

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ
ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ ಕಣಕಣದಲ್ಲೂ ಬಸವ ತತ್ವ ಪಸರಿಸಿದೆ. ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಸವ ತತ್ವಗಳನ್ನು ಅನುಸರಿಸುತ್ತಿರುವುದು ಎಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದು ಹಿರಿಯ ಮುಖಂಡ ಗಜಾನನ ಮಂಗಸೂಳಿ ಹೇಳಿದರು.
ಸಮೀಪದ ಸವದಿ ಗ್ರಾಮದಲ್ಲಿ ಶನಿವಾರ ಜರುಗಿದ ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಲಿಂ. ಡಾ. ಮಹಾಂತ ಶಿವಯೋಗಿಗಳವರನ್ನು ಪಡೆದ ಸವದಿ ಗ್ರಾಮದ ಭಕ್ತರು ಭಾಗ್ಯವಂತರು. ಸವದಿಯಲ್ಲಿ ಜರಗುವ ಶರಣ ತತ್ವದ ಕಾರ್ಯಕ್ರಮಗಳು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತಿವೆ ಎಂದು ಅವರು ಹೇಳಿದರು. ಆಧ್ಯಾತ್ಮಿಕ ಚಿಂತಕ ಶ್ರೀ ಶಶಿಕಾಂತ ಗುರೂಜಿ ಮಾತನಾಡಿ ಹಿರಿಯರು ತಮ್ಮ ಮನೆಯ ಮಕ್ಕಳನ್ನು ಬೇರೆಯವರಿಗೆ ಪರಿಚಯಿಸುವಾಗ ಸರಕಾರಿ ನೌಕರಿ ಮಾಡುವವರನ್ನು ಪರಿಚಯಿಸುವುದರ ಜೊತೆಗೆ ಮನೆಯಲ್ಲಿ ವ್ಯವಸಾಯ ಮಾಡುವ ದೇಶಕ್ಕೆ ಅನ್ನ ನೀಡುವ ರೈತ ಮಗನನ್ನು ಇತರರಿಗೆ ಪರಿಚಯಿಸಬೇಕು. ರೈತರ ನಿತ್ಯ ಮಾಡುವ ಕಾಯಕವನ್ನು ಉದ್ದೇಶಿಸಿಯೇ ಬಸವಣ್ಣನವರು ಕಾಯಕವೇ ಕೈಲಾಸವೆಂದು 12 ನೆಯ ಶತಮಾನದಲ್ಲಿ ಹೇಳಿದ್ದಾರೆಂದು ಅವರು ಹೇಳಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸವದಿ – ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿರೂರದ ಡಾ. ಬಸವಲಿಂಗ ಸ್ವಾಮೀಜಿ, ಸಿದ್ದಯ್ಯಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ಗುರುಬಸವ ಸ್ವಾಮೀಜಿ, ಶರಣ ಸಾಹಿತಿ ಸಿದ್ದಣ್ಣ ಲಂಗೋಟಿ, ಸಂಖದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಜಮಖಂಡಿಯ ಶ್ರೀ ಆನಂದ ದೇವರು, ಸಾಹಿತಿ ದೇವೇಂದ್ರ ಬಿಸ್ವಾಗರ, ಧಾರವಾಡದ ಡಾ. ಶಕ್ತಿ ಪಾಟೀಲ, ಅಪ್ಪುಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನೂರು ಜನ ರೈತ ದಂಪತಿಗಳನ್ನು ಶ್ರೀಮಠದಿಂದ ಗೌರವಿಸಿ ಸತ್ಕರಿಸಲಾಯಿತು.
ಸವದಿ ಗ್ರಾಮದ ಶ್ರೀ ಸಂಗನಬಸವ ಮಠದ ಶರಣ ಸಂಸ್ಕೃತಿ ಮಹೋತ್ಸವದಲ್ಲಿ ಹಿರಿಯ ಮುಖಂಡ ಗಜಾನನ ಮಂಗಸೂಳಿ ಹಾಗೂ ಹಿರಿಯ ಸಾಹಿತಿ ದೇವೇಂದ್ರ ಬಿಸ್ವಾಗರ ಅವರನ್ನು ಗೌರವಿಸಿ ಸತ್ಕರಿಸಿದ ಸವದಿ – ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ.

Hot this week

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

Topics

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ ಸುರಪುರ:ನಗರದ ಶ್ರೀ ಪ್ರಭು...
spot_img

Related Articles

Popular Categories

spot_img