Sunday, August 9, 2026
21.4 C
Belagavi

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

advertisement

spot_img

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ
ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ ಕಣಕಣದಲ್ಲೂ ಬಸವ ತತ್ವ ಪಸರಿಸಿದೆ. ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಸವ ತತ್ವಗಳನ್ನು ಅನುಸರಿಸುತ್ತಿರುವುದು ಎಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದು ಹಿರಿಯ ಮುಖಂಡ ಗಜಾನನ ಮಂಗಸೂಳಿ ಹೇಳಿದರು.
ಸಮೀಪದ ಸವದಿ ಗ್ರಾಮದಲ್ಲಿ ಶನಿವಾರ ಜರುಗಿದ ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಲಿಂ. ಡಾ. ಮಹಾಂತ ಶಿವಯೋಗಿಗಳವರನ್ನು ಪಡೆದ ಸವದಿ ಗ್ರಾಮದ ಭಕ್ತರು ಭಾಗ್ಯವಂತರು. ಸವದಿಯಲ್ಲಿ ಜರಗುವ ಶರಣ ತತ್ವದ ಕಾರ್ಯಕ್ರಮಗಳು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತಿವೆ ಎಂದು ಅವರು ಹೇಳಿದರು. ಆಧ್ಯಾತ್ಮಿಕ ಚಿಂತಕ ಶ್ರೀ ಶಶಿಕಾಂತ ಗುರೂಜಿ ಮಾತನಾಡಿ ಹಿರಿಯರು ತಮ್ಮ ಮನೆಯ ಮಕ್ಕಳನ್ನು ಬೇರೆಯವರಿಗೆ ಪರಿಚಯಿಸುವಾಗ ಸರಕಾರಿ ನೌಕರಿ ಮಾಡುವವರನ್ನು ಪರಿಚಯಿಸುವುದರ ಜೊತೆಗೆ ಮನೆಯಲ್ಲಿ ವ್ಯವಸಾಯ ಮಾಡುವ ದೇಶಕ್ಕೆ ಅನ್ನ ನೀಡುವ ರೈತ ಮಗನನ್ನು ಇತರರಿಗೆ ಪರಿಚಯಿಸಬೇಕು. ರೈತರ ನಿತ್ಯ ಮಾಡುವ ಕಾಯಕವನ್ನು ಉದ್ದೇಶಿಸಿಯೇ ಬಸವಣ್ಣನವರು ಕಾಯಕವೇ ಕೈಲಾಸವೆಂದು 12 ನೆಯ ಶತಮಾನದಲ್ಲಿ ಹೇಳಿದ್ದಾರೆಂದು ಅವರು ಹೇಳಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸವದಿ – ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿರೂರದ ಡಾ. ಬಸವಲಿಂಗ ಸ್ವಾಮೀಜಿ, ಸಿದ್ದಯ್ಯಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ಗುರುಬಸವ ಸ್ವಾಮೀಜಿ, ಶರಣ ಸಾಹಿತಿ ಸಿದ್ದಣ್ಣ ಲಂಗೋಟಿ, ಸಂಖದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಜಮಖಂಡಿಯ ಶ್ರೀ ಆನಂದ ದೇವರು, ಸಾಹಿತಿ ದೇವೇಂದ್ರ ಬಿಸ್ವಾಗರ, ಧಾರವಾಡದ ಡಾ. ಶಕ್ತಿ ಪಾಟೀಲ, ಅಪ್ಪುಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನೂರು ಜನ ರೈತ ದಂಪತಿಗಳನ್ನು ಶ್ರೀಮಠದಿಂದ ಗೌರವಿಸಿ ಸತ್ಕರಿಸಲಾಯಿತು.
ಸವದಿ ಗ್ರಾಮದ ಶ್ರೀ ಸಂಗನಬಸವ ಮಠದ ಶರಣ ಸಂಸ್ಕೃತಿ ಮಹೋತ್ಸವದಲ್ಲಿ ಹಿರಿಯ ಮುಖಂಡ ಗಜಾನನ ಮಂಗಸೂಳಿ ಹಾಗೂ ಹಿರಿಯ ಸಾಹಿತಿ ದೇವೇಂದ್ರ ಬಿಸ್ವಾಗರ ಅವರನ್ನು ಗೌರವಿಸಿ ಸತ್ಕರಿಸಿದ ಸವದಿ – ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img