Monday, August 10, 2026
22.1 C
Belagavi

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಯುವಕರು ಕೃಷಿಯತ್ತ ಮರಳಬೇಕು: ಸಿಎಂ ಕರೆ

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 2: ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಅವರು ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದರು.

ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ ಮೇಲೆ ಅವಲಂಬಿಸಿದ್ದು, ರೇಷ್ಮೆ ಲಾಭದಾಯಕವಾದ ಕಸುಬು. ಅದಕ್ಕಾಗಿಯೇ ಹೆಚ್ಚು ಜನ ವ್ಯವಸಾಯದ ಜೊತೆಗೆ ಉಪಕಸುಬು ಮಾಡಬೇಕು ಎಂದರು. ಕೃಷಿ ಯಿಂದ ವಿಮುಖರಾಗುತ್ತಿರುವ ಯುವಜನಾಂಗವನ್ನು ಪುನ: ಸೆಳೆಯಲು ರೇಷ್ಮೆ ತೋಟಗಾರಿಕೆ, ಪಶುಸಂಗೋಪನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ಬೈವೋಲ್ಟೀನ್ ರೇಷ್ಮೆಗೆ ಬೇಡಿಕೆ

ಬೈವೋಲ್ಟೀನ್ ರೇಷ್ಮೆಗೆ ಬೇಡಿಕೆ ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಸಾಗಾಣಿಕೆ ವೆಚ್ಚವನ್ನು 10 ರಿಂದ 20. ರೂ.ಗಳಿಗೆ ಹೆಚ್ಚಿಸಲಾಯಿತು ಮತ್ತು ಬೈವೋಲ್ಟೀನ್ ಬೆಳೆಯಲು ಹೆಚ್ಚಿನ ನೆರವನ್ನು ನೀಡಲು ಬದ್ಧವಾಗಿದೆ ಎಂದರು. ಕಚ್ಚಾ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಹಾಗೂ ಕಾಫಿ ಉತ್ಪಾದನೆಯಲ್ಲಿಯೂ ಮೊದಲ ಸ್ಥಾನದಲ್ಲಿದ್ದೇವೆ. ಒಂದು ದಿನಕ್ಕೆ 1 ಕೋಟಿ ಲೀ. ಹಾಲು ಹಾಲು ಉತ್ಪಾದನೆಯಲ್ಲಿ 1.22 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆ ಹಾಕಲಾಗಿದೆ ಎಂದು ವಿವರಿಸಿದರು.

ಇತರೆ ಇಲಾಖೆಗಳಿಗೂ ಸ್ಥಳಾವಾಕಾಶ

ಓಕಳೀಪುರಂನಲ್ಲಿರುವ 4 ಎಕರೆ 25 ಗುಂಟೆ ವಿಸ್ತೀರ್ಣದ ಈ ಸ್ಥಳ ರೇಷ್ಮೆ ಇಲಾಖೆಗೆ ಸೇರಿದ್ದು 1995 ರಲ್ಲಿ ಇದನ್ನು ಖರೀದಿಸಲಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೇಷ್ಮೆ ಭವನದ ಅಗತ್ಯತೆಯನ್ನು ಮನಗಂಡು ಸ್ಥಳವನ್ನು ರೇಷ್ಮೆ ಇಲಾಖೆ ಕೊಟ್ಟರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೇರಿದ ಮೈಸೂರು ಖನಿಜ ಕಾರ್ಪೋರೇಷನ್ ವತಿಯಿಂದ ಭವನ ನಿರ್ಮಾಣ ಮಾಡುವುದು ಎಂದು ತೀರ್ಮಾನಿಸಿ ಈ ಕ್ರಮ ಕೈಗೊಳ್ಳಲಾಗಿದೆ. ರೇಷ್ಮೆ ಇಲಾಖೆಯ ಅಭಿವೃದ್ಧಿಯ ದೃಷ್ಟಿಯಿಂದ ಅಗತ್ಯವಿರುವಷ್ಟು ಸ್ಥಳವನ್ನು ಬಳಸಿಕೊಂಡು ಇತರೆ ಇಲಾಖೆಗಳಿಗೂ ಸ್ಥಳಾವಾಕಾಶವನ್ನು ಮಾಡಿಕೊಡುವಂತೆ ಸೂಚಿಸಲಾಗಿದೆ ಎಂದರು.

ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು

ರೂ. 666.75 ಕೋಟಿ ಗಳಿಗೆ ಟೆಂಡರ್ ಆಗಿದ್ದು, ಮೂರು ವರ್ಷಗಳ ಅವಧಿಯಲ್ಲಿ ಕಟ್ಟಡ ನಿರ್ಮಾಣವಾಗಬೇಕು, 13 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಿದ್ದು ಕಟ್ಟಡ ಸದೃಢವಾಗಿರಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಗುತ್ತಿಗೆದಾರರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಮೂರು ವರ್ಷಗಳ ಕಾಲಮಿತಿಯಲ್ಲಿ ಕಟ್ಟಡ ಮುಗಿಯದಿದ್ದರೆ ಕ್ರಮ ನಿಮ್ಮ ವಿರುದ್ಧ ಕ್ರಮವಹಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಸಚಿವರಾದ ದಿನೇಶ್ ಗುಂಡೂರಾವ್, ವೆಂಕಟೇಶ್, ಖನಿಜ ನಿಗಮದ ಅಧ್ಯಕ್ಷ ಜಿ.ಎಸ್ .ಪಾಟೀಲ್, ಉಪಾಧ್ಯಕ್ಷ ಹೆಚ್. ಲಕ್ಷ್ಮಣ್, ರೇಷ್ಮೆ ಇಲಾಖೆ ಉಪಸ್ಥಿತರಿದ್ದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img